ರಾಜ್ಯ

ಕೆ ಐ ಎ ಡಿ ಬಿ ನೂರಾರು ಕೋಟಿ ಹಗರಣ : ಕೊನೆಗೂ ಎಚ್ಚೆತ್ತ ರಾಜ್ಯ ಸರಕಾರ, ನಾಲ್ವರ ವಿರುದ್ದ ಪ್ರಕರಣ ದಾಖಲಿಸಲು ಸೂಚನೆ

ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಿ ಮಹತ್ವದ ಆದೇಶ

ಜನಜಾಗೃತಿ ಸಂಘ ದ ಅಧ್ಯಕ್ಷ ಬಸವರಾಜ ಕೊರವರ ಹೋರಾಟಕ್ಕೆ ಮೊದಲ ಹಂತದ ಜಯ

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ರೈತರು ಹಾಗೂ ಸಾಮಾನ್ಯ ಜನತೆಯನ್ನು ಬೆಚ್ಚಿ ಬಿಳಿಸಿದ್ದ ಕೆ ಐ ಎ ಡಿ ಬಿ ( ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ
ನೂರಾರು ಕೋಟಿ ಹಗರಣದ ಬಗ್ಗೆ
ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಅವರು ದಾಖಲೆ ಬಿಡುಗಡೆ ಮಾಡಿ ಈ ಕುರಿತು ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಸಚಿವರಿಗೆ ಲಿಖಿತ ದೂರು ನೀಡಿದ ನಂತರ ಕೊನೆಗೂ ಎಚ್ಚೆತ್ತ ರಾಜ್ಯ ಸರಕಾರ ಈ ಕುರಿತು ಮಹತ್ವದ ಹೆಜ್ಜೆ ಇರಿಸಿದೆ‌.

ಈ ಹಗರಣದಲ್ಲಿ ಭಾಗಿಯಾದ
ನಾಲ್ವರ ವಿರುದ್ದ ಪ್ರಕರಣ ದಾಖಲಿಸಲು ಸೂಚನೆ ನೀಡಿದೆ.

ಜೊತೆಗೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಿ ಮಹತ್ವದ ಆದೇಶ ಹೊರಡಿಸಿದೆ.

ಈ ಬಗ್ಗೆ ಕೆ ಐ ಎ ಡಿ ಬಿ ಧಾರವಾಡ ಜಿಲ್ಲೆಯ ಅಧಿಕಾರಿ ಮಮತಾ ಅವರನ್ನು ಪ್ರಜಾಕಿರಣ.ಕಾಮ್ ಸಂರ್ಪಕಿಸಿದಾಗ ಇದನ್ನು ಅವರು ಖಚಿತ ಪಡಿಸಿದ್ದಾರೆ‌.

ಅಲ್ಲದೆ, ಈ ಬಗ್ಗೆ ನಾಳೆ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *