ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಿ ಮಹತ್ವದ ಆದೇಶ
ಜನಜಾಗೃತಿ ಸಂಘ ದ ಅಧ್ಯಕ್ಷ ಬಸವರಾಜ ಕೊರವರ ಹೋರಾಟಕ್ಕೆ ಮೊದಲ ಹಂತದ ಜಯ
ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ಜಿಲ್ಲೆಯ ರೈತರು ಹಾಗೂ ಸಾಮಾನ್ಯ ಜನತೆಯನ್ನು ಬೆಚ್ಚಿ ಬಿಳಿಸಿದ್ದ ಕೆ ಐ ಎ ಡಿ ಬಿ ( ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ
ನೂರಾರು ಕೋಟಿ ಹಗರಣದ ಬಗ್ಗೆ
ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಅವರು ದಾಖಲೆ ಬಿಡುಗಡೆ ಮಾಡಿ ಈ ಕುರಿತು ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಸಚಿವರಿಗೆ ಲಿಖಿತ ದೂರು ನೀಡಿದ ನಂತರ ಕೊನೆಗೂ ಎಚ್ಚೆತ್ತ ರಾಜ್ಯ ಸರಕಾರ ಈ ಕುರಿತು ಮಹತ್ವದ ಹೆಜ್ಜೆ ಇರಿಸಿದೆ.
ಈ ಹಗರಣದಲ್ಲಿ ಭಾಗಿಯಾದ
ನಾಲ್ವರ ವಿರುದ್ದ ಪ್ರಕರಣ ದಾಖಲಿಸಲು ಸೂಚನೆ ನೀಡಿದೆ.
ಜೊತೆಗೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಿ ಮಹತ್ವದ ಆದೇಶ ಹೊರಡಿಸಿದೆ.
ಈ ಬಗ್ಗೆ ಕೆ ಐ ಎ ಡಿ ಬಿ ಧಾರವಾಡ ಜಿಲ್ಲೆಯ ಅಧಿಕಾರಿ ಮಮತಾ ಅವರನ್ನು ಪ್ರಜಾಕಿರಣ.ಕಾಮ್ ಸಂರ್ಪಕಿಸಿದಾಗ ಇದನ್ನು ಅವರು ಖಚಿತ ಪಡಿಸಿದ್ದಾರೆ.
ಅಲ್ಲದೆ, ಈ ಬಗ್ಗೆ ನಾಳೆ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.