ರಾಜ್ಯ

ಧಾರವಾಡದ ಗುಡಿಸಾಗರ ಪ್ರಾಥಮಿಕ ಶಾಲೆಯ 36 ಮಕ್ಕಳಲ್ಲಿ ವಾಂತಿ, ವಾಕರಿಕೆ….!

 ಮಧ್ಯಾಹ್ನದ ಬಿಸಿಯೂಟ ಸೇವನೆ ನಂತರ ಮಕ್ಕಳಲ್ಲಿ ವಾಂತಿ ; ತಕ್ಷಣ ಸೂಕ್ತ ಚಿಕಿತ್ಸೆ ನೀಡಿದ ಆರೋಗ್ಯ ಇಲಾಖೆ;

*ಎಲ್ಲ ಮಕ್ಕಳು ಗುಣಮುಖ :ಡಿ.ಎಚ್.ಓ. ಡಾ.ಶಶಿ ಪಾಟೀಲ*

*ಧಾರವಾಡ ಪ್ರಜಾಕಿರಣ.ಕಾಮ್ : ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟ ನೀಡಿದಾಗ, ಅನ್ನದಲ್ಲಿ ಹಲ್ಲಿಯಂತ ಹುಳು ಕಂಡುಬಂದ್ದರಿಂದ, ಊಟ ಸೇವಿಸಿದ ಸುಮಾರು 36 ಮಕ್ಕಳಲ್ಲಿ ವಾಂತಿ ಕಂಡುಬಂದಿದೆ.

ವಿಷಯ ತಿಳಿದ ತಕ್ಷಣ ಶಲವಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ಸ್ಥಳದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನವಲಗುಂದ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಯಿತು.

ಎಲ್ಲ ಮಕ್ಕಳು ಗುಣಮುಖರಾಗಿ, ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ  ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಾಲಾ ಮುಖ್ಯಸ್ಥರಿಂದ ಈ ಮಾಹಿತಿ ಬಂದ ತಕ್ಷಣ, ಶಲವಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶೋಕ ಅಗರವಾಲ್ ಅವರಿಗೆ ತಕ್ಷಣ ಸ್ಥಳಕ್ಕೆ ತೆರಳಿ ಸೂಕ್ತ ಚಿಕಿತ್ಸೆ ನೀಡಿದರು‌.

ಅದರಂತೆ ಅವರು ಮಕ್ಕಳಿಗೆ ಸ್ಥಳದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಮತ್ತು ಮುಂಜಾಗೃತೆಗಾಗಿ, ಹೆಚ್ಚಿನ ಚಿಕಿತ್ಸೆಗಾಗಿ ನವಲಗುಂದ ತಾಲೂಕಾ ಆಸ್ಪತ್ರೆಗೆ ಸುಮಾರು 36 ಮಕ್ಕಳನ್ನು ದಾಖಲಿಸಿದ್ದಾರೆ.

ಅವರಿಗೆ ನವಲಗುಂದ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ವಿದ್ಯಾ ಹಾಗೂ ಡಾ. ಮಹೇಶ ನೇತೃತ್ವದಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ನೀಡಿದ್ದು ಬಹುತೇಕರು ಚೇತರಿಕೆಯಾಗಿದ್ದಾರೆ.

6 ಮಕ್ಕಳಿಗೆ ಮಾತ್ರ ವಾಂತಿ ಕಾರಣಕ್ಕಾಗಿ ಸಲೈನ್ ಹಚ್ಚಲಾಗಿತ್ತು. ಅವರು ಸಹ ಸಂಜೆಯೊಳಗೆ ಸಂಪೂರ್ಣ ಚೇತರಿಕೆ ಆಗಿದ್ದಾರೆ.

ಯಾವುದೆ ಮಕ್ಕಳಿಗೆ ಅಪಾಯವಿಲ್ಲ. ಪಾಲಕರು ಗಾಬರಿಯಾಗದಂತೆ ಡಾ.ಶಶಿ ಪಾಟೀಲ ಮನವಿ ಮಾಡಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ, ಡಿ.ಎಸ್.ಓ ಡಾ.ಸುಜಾತಾ ಹಸವಿಮಠ, ಆರ್‍ಸಿಎಚ್‍ಓ ಡಾ.ಎಸ್.ಎಂ.ಹೊನಕೇರಿ ಅವರು ಸ್ಥಳದಲ್ಲಿದ್ದು, ಮಕ್ಕಳ ಆರೋಗ್ಯ ಚಿಕಿತ್ಸೆ ಬಗ್ಗೆ ನಿಗಾವಹಿಸಿ, ಸೂಕ್ತ ಚಿಕಿತ್ಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *