ಮಡಿಕೇರಿ prajakiran.com : ಹಸುವೊಂದನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಧಾರುಣ ಘಟನೆ ಮಡಿಕೇರಿ ತಾಲ್ಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ.
ನಿನ್ನೆ ಸಂಜೆ ಈ ಪ್ರಕರಣ ನಡೆದಿದೆ. ಇನ್ನೂ ಈ ವಿಷಯ ತಿಳಿದು ಸ್ಥಳಕ್ಕೆ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ದೌಡಾಯಿಸಿದ್ದಾರೆ.
ಈ ವೇಳೆ ಮುಂಚೂಣಿ ತಂಡದ ಕಾರ್ಯಕರ್ತನ ಎದೆಗೆ ಕೋವಿಯಿಟ್ಟು ಬೆದರಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಸ್ಥಳದಲ್ಲಿದ್ದ ಗೋಮಾಂಸ ಮತ್ತು ಚಾಕು ವಶಪಡಿಸಿಕೊಂಡಿದ್ದಾರೆ.
ಮಾತ್ರವಲ್ಲದೆ ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಇದೇ ಮಡಿಕೇರಿ ಭಾಗದಲ್ಲಿ ಗೋಮಾಂಸಕ್ಕಾಗಿ ಗೋವನ್ನು ಕಳವು ಮಾಡಲಾಗಿತ್ತು.
ಅಲ್ಲದೇ ಕಳೆದ ವಾರವಷ್ಟೆ ಕಗ್ಗೋಡ್ಲುವಿನಲ್ಲಿ ರೈತರ ಗೋವಿಗೆ ಗುಂಡಿಕ್ಕಿದ ದುಷ್ಕರ್ಮಿಗಳು ಮಾಂಸ ಮಾಡಿ ಕೊಂಡೊಯ್ದಿದ್ದರು. ಇದೀಗ ಮತ್ತೊಂದು ಪ್ರಕರಣದ ಹಿನ್ನಲೆಯಲ್ಲಿ ಆಕ್ರೋಶ ಭುಗಿಲೆದೆದ್ದಿದೆ.