ರಾಜ್ಯ

ಧಾರವಾಡದಲ್ಲಿ ಪತ್ನಿ ಕೊಂದ ಪತಿಗೂ ವಕ್ಕರಿಸಿದ ಕಿಲ್ಲರ್ ಕರೋನಾ….!




ಧಾರವಾಡ prajakiran.com : ಪತ್ನಿಯನ್ನು ಕೊಂದ ಪತಿಗೂ ಕಿಲ್ಲರ್ ಕರೋನಾ ವಕ್ಕರಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದ ಕೊಲೆ ಆರೋಪಿಯನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಸೋಂಕುಇರುವುದು ದೃಢಪಟ್ಟಿದೆ.



ಇದರಿಂದಾಗಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ 13 ಪೊಲೀಸರನ್ನು ಹೋಂ ಕ್ವಾರಂಟಿನ್ ಮಾಡಲಾಗಿದ್ದು, ಹುಬ್ಬಳ್ಳಿಯ ಮಿನಿವಿಧಾನಸೌಧವನ್ನು ಸೀಲ್ ಡೌನ್ ಮಾಡಲಾಗಿದೆ.

ಅಲ್ಲದೆ, ಅದರಲ್ಲಿದ್ದ ಪೊಲೀಸ್ ಠಾಣೆಯನ್ನು ಛಬ್ಬಿ ಗ್ರಾಮದಲ್ಲಿದ್ದ ಹೊರ ಪೊಲೀಸ್ ಠಾಣೆಗೆ ಸ್ಥಳಾಂತರ ಮಾಡಲಾಗಿದೆ.

ಇದರಿಂದಾಗಿ ಹುಬ್ಬಳ್ಳಿ ಗ್ರಾಮೀಣ ಪೊಲೀಸರಿಗೆ ಆತಂಕ ಶುರುವಾಗಿದ್ದು, ಕರೋನಾ ಹರಡುವ ಭಯ ಶುರುವಾಗಿದೆ. ವರದಿ ನೆಗೆಟಿವ್ ಬರುತ್ತಾ ಅಥವಾ ಪಾಸಿಟಿವ್ ಬರುತ್ತಾ ಎಂಬುದು ಕಾದು ನೋಡಬೇಕಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *