hubli kims
ರಾಜ್ಯ

ಹುಬ್ಬಳ್ಳಿ ಕಿಮ್ಸ್  ನರ್ಸಿಂಗ್ ಸಿಬ್ಬಂದಿ ನಿರ್ಲಕ್ಷ್ಯ ವರದಿ ಸಲ್ಲಿಸಲು ಸೂಚನೆ

ಡಿಹೆಚ್‍ಓ ಗೆ ಜಿಲ್ಲಾಧಿಕಾರಿಗಳ ಸೂಚನೆ

ಧಾರವಾಡ prajakiran. com ಜ.18: ಕಿಮ್ಸ್ ವೇದಾಂತ ಕೋವಿಡ್ ಕೇರ್ ಸೆಂಟರ್‍ನಲ್ಲಿ ನಿನ್ನೆಯ ದಿನ (ಜ.17) ನರ್ಸಿಂಗ್ ಸಿಬ್ಬಂದಿಗಳ ನಿರ್ಲಕ್ಷದಿಂದ ಕೋವಿಡ್ ಸೋಂಕಿತ ಮಹಿಳೆ ಮೃತಪಟ್ಟಿರುವ ಕುರಿತು ವರದಿಯಾಗಿದೆ.

ಈ ಕುರಿತು ಸೂಕ್ತ ತನಿಖೆ ಮಾಡಿ 24 ಗಂಟೆಯೊಳಗೆ ವರದಿ ಸಲ್ಲಿಸಲು ಜಿಲ್ಲಾ ಆರೋಗ್ಯಾಧಿಕಾರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಲಿಖಿತ ಸೂಚನೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗೃತೆ ವಹಿಸಲಾಗಿದೆ. ಚಿಕಿತ್ಸೆಗೆ ಅಗತ್ಯವಿರುವ ಬೆಡ್, ವೈದ್ಯಕೀಯ ಸೌಲಭ್ಯ, ಆಕ್ಸಿಜನ್, ಔಷಧಿಗಳ ಸಂಗ್ರಹ ಹಾಗೂ ವಿತರಣೆಗೆ ಕ್ರಮ ವಹಿಸಲಾಗಿದೆ.

ಸೋಂಕಿತರಿಗೆ ಅಗತ್ಯವಿರುವ ಆರೋಗ್ಯ ಸೇವೆಗಳನ್ನು ಪೂರೈಸಲು ಯೋಜಿತ ರೀತಿಯಲ್ಲಿ ಕಾರ್ಯಗಳನ್ನು ಸಿದ್ಧಗೊಳಿಸಲಾಗಿದೆ.

ಕೋವಿಡ್ ಸೋಂಕಿತರು ಜಿಲ್ಲಾಡಳಿತ ಆರಂಭಿಸಿರುವ ಉಚಿತ ಸಹಾಯವಾಣಿ +91 8047168111 ಗೆ ಕರೆ ಮಾಡಿ ಬೆಡ್ ಲಭ್ಯತೆಯ ಮಾಹಿತಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *