ರಾಜ್ಯ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ನಡುವೆ ಕಿತ್ತಾಟ

ಹುಬ್ಬಳ್ಳಿ prajakiran.com : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ನಡುವೆ ಕಿತ್ತಾಟ ನಡೆದಿದೆ.

2019ರಿಂದ ಕಿಮ್ಸ್ ಆಡಳಿತಾಧಿಕಾರಿಯಾಗಿದ್ದ ರಾಜಶ್ರೀ ಜೈನಾಪುರ ಅವರನ್ನು ರಾಜ್ಯ ಸರ್ಕಾರ ಫೆ. 5 ರಂದು ವರ್ಗಾವಣೆ ಮಾಡಿತ್ತು.

ಜೈನಾಪುರ ಅವರಿಂದ ತೆರವಾಗಿದ್ದ ಜಾಗಕ್ಕೆ ವರ್ಗಾವಣೆಯಾಗಿ ಬಂದಿದ್ದ ಇಸ್ಮಾಯಿಲ್ ಸಾಬ್ ಶಿರಹಟ್ಟಿ ಅವರು ವರ್ಗವಾಗಿ ಬಂದಿದ್ದರು.

ಕೃಷ್ಣಾ ಮೇಲ್ದಂಡೆ ಪುನರ್ವಸತಿ ಅಧಿಕಾರಿಯಾಗಿ ಬಾಗಲಕೋಟೆ ಯಲ್ಲಿ ಕೆಲಸ ಮಾಡುತ್ತಿದ್ದ ಶಿರಹಟ್ಟಿ

ಕಳೆದ 3 ದಿನಗಳಿಂದ ಕಿಮ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಿರಹಟ್ಟಿ ಅವರಿಗೆ ಅಧಿಕಾರ ಹಸ್ತಾಂತರ ಮಾಡದೆ ರಜೆ ಮೇಲೆ ಹೋಗಿರುವ ರಾಜಶ್ರೀ ಜೈನಾಪುರ ನಡೆ ಬೇಸರ ಮೂಡಿಸಿದೆ‌.

ಕಿಮ್ಸ್ ಆಡಳಿತ ಭವನದಲ್ಲಿ ಇನ್ನು ಜೈನಾಪುರ ಹೆಸರನ್ನೇ ನಾಮಫಲಕ ಹಾಕಿರುವ ಆಡಳಿತ ಮಂಡಳಿ ನಡೆ ಈ ಅನುಮಾನಕ್ಕೆ ಕಾರಣವಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *