ಬೆಂಗಳೂರು prajakiran.com :
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ವೀರಶೈವ -ಲಿಂಗಾಯತ ಪರಂಪರೆಯ
ಪ್ರತಿಷ್ಠಿತ ಕೊಳದ ಮಠದ ಪೀಠಾಧಿಪತಿಗಳಾಗಿದ್ದ ಪರಮಪೂಜ್ಯ ಶಾಂತವೀರ ಮಹಾಸ್ವಾಮಿಜಿಗಳು ಶನಿವಾರ ಲಿಂಗೈಕ್ಯರಾಗಿದ್ದಾರೆ.
ಪೂಜ್ಯರು ಹಲವಾರು ಸಂಘ ಸಂಸ್ಥೆಗಳನ್ನು ಸ್ಥಾಪಿಸಿ, ಪರಂಪರೆಯ ವಾರಸುದಾರರಿಗೆ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನದುದ್ದಕ್ಕೂ ಹೋರಾಡುತ್ತಲೇ ಇಹಲೋಕವನ್ನು ತ್ಯಜಿಸಿದ್ದಾರೆ.
ಇವರ ನಿಧನದಿಂದ ಸಾಮಾಜಿಕ,ಆಧ್ಯಾತ್ಮಿಕ, ಶೈಕ್ಷಣಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಪೂಜ್ಯರ ತತ್ವ ಸಿದ್ದಾಂತಗಳ ಮಾರ್ಗದಲ್ಲಿ ಸಾಗಿ ಅವರ ಕನಸನ್ನು ನನಸಾಗಿಸಿದಾಗ ಮಾತ್ರ ಅವರಿಗೆ ನಿಜವಾದ ಅರ್ಥದಲ್ಲಿ ಶೃದ್ದಾoಜಲಿ ಸಲ್ಲಿಸಿದಂತಾಗುತ್ತದೆ.
ಬೆಂಗಳೂರಿನ ಕೊಳದ ಮಠ ಮಹಾಸಂಸ್ಥಾನ ಮಠದ ಶಿವಾನುಭವ ಚರಮೂರ್ತಿ ಶ್ರೀ ಮ.ನಿ.ಪ್ರ ಡಾ: ಶ್ರೀ ಶಾಂತವೀರ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಧರ್ಮಜಾಗೃತಿ, ಸಮಾಜ ಸುಧಾರಣೆಯಲ್ಲಿ ನಿರತರಾಗಿದ್ದ ಸ್ವಾಮಿಗಳು ಬಸವ ತತ್ವಗಳ ಅನುಷ್ಠಾನಕ್ಕೆ ಶ್ರಮಿಸಿದ್ದರು. ಅವರ ನಿಧನದಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ.
ಅವರ ಆತ್ಮಕ್ಕೆ ಸದ್ಗತಿ ದೊರಕಲಿ. ಭಕ್ತರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.