ರಾಜ್ಯ

ಧಾರವಾಡ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಕೋನರಡ್ಡಿ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ನವಲಗುಂದ, ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ, ಕಲಘಟಗಿ, ಅಳ್ನಾವರ ಹಾಗೂ ಧಾರವಾಡ ತಾಲ್ಲೂಕಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ೨೦೧೯-೨೦ ರ ಮುಂಗಾರಿನಲ್ಲಿ ವಿಮಾ ತುಂಬಿದ ಹತ್ತಿ, ಹೆಸರು, ಮೆಣಸಿನಕಾಯಿ, ಈರುಳ್ಳಿ, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆ ಬೆಳೆದ ರೈತರು ಕಳೆದ ವರ್ಷ ಅತಿವೃಷಿಯಿಂದ ಬೆಳೆ ಹಾನಿಯಾಗಿ ಈ ಸಲ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಿಮಾ ಕಂಪನಿಯವರು ರೈತರಿಂದ ಬೆಳೆವಿಮೆ ತುಂಬಿಸಿಕೊಳ್ಳಲು ದಿನಾಂಕವನ್ನು ನಿಗದಿ ಮಾಡಿ ಹಣ ತುಂಬಿಸಿಕೊಳ್ಳುತ್ತಾರೆ.

ಆದರೆ ಬೆಳೆಹಾನಿಯಾಗಿ ೧ ವರ್ಷ ಕಳೆದರೂ ಇಲ್ಲಿಯವರೆಗೂ ಆ ರೈತರಿಗೆ ವಿಮಾ ಕಂಪನಿಗಳಿಂದ ಸೂಕ್ತ ಬೆಳೆವಿಮೆ ದೊರಕಿದಿರುವುದು ದುರಂತದ ಸಂಗತಿ.

 ವಿಮೆ ತುಂಬಲು ಕೊನೆ ದಿನಾಂಕ ನಿಗದಿಪಡಿಸಿದ ರೀತಿಯಲ್ಲಿಯೇ ಪರಿಹಾರ ವಿತರಿಸಲು ದಿನಾಂಕವನ್ನು ಕೇಂದ್ರ ಸರಕಾರ ವಿಮ ಕಂಪನಿಗೆ ನಿಗದಿಪಡಿಸಬೇಕು 

 ೨೦೧೯-೨೦ ರ ಬೆಳೆವಿಮೆಯನ್ನು ತಕ್ಷಣ ರೈತರ ಖಾತೆಗಳಿಗೆ ಜಮಾ ಮಾಡಬೇಕೆಂದು ನವಲಗುಂದ ಮಾಜಿ ಶಾಸಕ ಹಾಗೂ ಜೆ.ಡಿ.ಎಸ್. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಹೆಚ್. ಕೋನರಡ್ಡಿ ಅವರು ಧಾರವಾಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *