ಜಿಲ್ಲೆ

ಕೊಪ್ಪಳದ ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣಾಚಾರ್ಯ ಪ್ಯಾಟಿ ಇನ್ನಿಲ್ಲ

ಧಾರವಾಡ  prajakiran.com : ಕೊಪ್ಪಳದ ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣಾಚಾರ್ಯ ಪ್ಯಾಟಿ  (82) ಭಾನುವಾರ ಸೆ.27 ರಂದು  ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕೊಪ್ಪಳ ತಾಲೂಕಿನ ಗುನ್ನಳ್ಳಿ, ರಾಯಚೂರು ಜಿಲ್ಲೆಯ ಉಡುಮಗಲ್ – ಖಾನಾಪುರ,  ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳ,ಹಿರೇವಂಕಲಕುಂಟಾದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ,ಕಿನ್ನಾಳದಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತಿ ಹೊಂದಿದ್ದರು.

ಮೃತರು, ಪತ್ನಿ ರಾಧಾಬಾಯಿ, ಮಕ್ಕಳಾದ ಪತ್ರಕರ್ತರಾದ  ಆನಂದತೀರ್ಥ ಪ್ಯಾಟಿ,  ಟಿ ವಿ 9 ವರದಿಗಾರ ನರಸಿಂಹಮೂರ್ತಿ ಪ್ಯಾಟಿ ಸೇರಿದಂತೆ ಇಬ್ಬರು ಪುತ್ರಿಯರು, ಅಳಿಯಂದಿರು,ಸೊಸೆಯಂದಿರು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಭಾನುವಾರ ಧಾರವಾಡದಲ್ಲಿ ಜರುಗಿತು.ಅವರ ನಿಧನಕ್ಕೆ ಧಾರವಾಡದಅನೇಕ ಪತ್ರಕರ್ತರು ಹಾಗೂಪತ್ರಕರ್ತರ ಸಂಘಟನೆಗಳು ಕಂಬನಿ ಮಿಡಿದಿವೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *