ಬೆಂಗಳೂರು prajakiran.com : ರಾಜ್ಯಾದ್ಯಂತ ಜೂನ್ 8ರಿಂದ ಎಲ್ಲಾ ದೇವಸ್ಥಾನಗಳ ಬಾಗಿಲು ಓಪನ್ ಆಗಲಿವೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಸರಕಾರದ ಆದೇಶದಂತೆ ಈ ನಿರ್ಧಾರಕ್ಕೆ ಬರಲಾಗಿದ್ದು, ದೇವರನ್ನು ಮುಟ್ಟಿ ಪೂಜೆ ಮಾಡಲು ದೇಗುಲದ ಒಳಗೆ ಅರ್ಚಕರು ಮಾತ್ರ ಪ್ರವೇಶ ಮಾಡಲಿದ್ದಾರೆ ಎಂದು ಹೇಳಿದರು.
ಈ ಹಿಂದೆ ಜೂನ್ ಒಂದನೇ ತಾರೀಖಿನಿಂದ ಬಾಗಿಲು ತೆರೆಯಲಾಗುವುದು ಎಂದು ಅವರು ಹೇಳಿದ್ದರು. ಅದನ್ನು ಈಗ ಮಾರ್ಪಡಿಸಲಾಗಿದೆ ಎಂದರು.
ರಾಜ್ಯದಲ್ಲಿರುವ ಎಲ್ಲಾ ಧಾರ್ಮಿಕ ದತ್ತಿ ದೇವಸ್ಥಾನಗಳು ಹಾಗೂ ಧಾರ್ಮಿಕ ದತ್ತಿ ದೇವಸ್ಥಾನದ ವ್ಯಾಪ್ತಿಯಿಂದ ಹೊರಗಡೆಯಿರುವ ಎಲ್ಲಾ ದೇವಸ್ಥಾನಗಳಿಗೂ ಅನ್ವಯವಾಗಲಿದೆ ಎಂದರು.
ದೇವಸ್ಥಾನಗಳು ಆರಂಭಗೊಂಡ ನಂತರ ಪ್ರತಿಯೊಬ್ಬ ಭಕ್ತರು ಸಾಮಾಜಿಕಅಂತರ ಹಾಗೂ ಮಾಸ್ಕ ಧರಿಸುವುದು ಕಡ್ಡಾಯವಾಗಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.