ಬೆಂಗಳೂರು prajakiran.com : ಉತ್ತರಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರಾಜ್ಯದ ಬಿಜೆಪಿ ಸರಕಾರದ ವಿರುದ್ದ ಚಾಟಿ ಬೀಸಲು ಸಜ್ಜಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಅವರು ಈ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರಿಗೆ ಕರೋನಾ ತಗುಲಿರುವುದು ಕಾಂಗ್ರೆಸ್ ಕಟ್ಟಾಳುಗಳಿಗೆ ಹಾಗೂ ವಿಶೇಷವಾಗಿ ಅವರ ಬೆಂಬಲಿಗರ ಮನಸ್ಸಿಗೆ ಬೇಸರ ಉಂಟಾಗಿದೆ.
ಅವರು ಆದಷ್ಟು ಬೇಗ ಗುಣಮುಖರಾಗಿ ಪಕ್ಷ ಹಾಗೂ ನಾಡಿನ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. @INCKarnataka ಎಂದು ಅನೇಕ ಮಾಜಿ ಸಚಿವರು, ಶಾಸಕರು, ಕಾಂಗ್ರೆಸ್ ನಾಯಕರು ಶುಭ ಹಾರೈಸಿದ್ದಾರೆ.