ಧಾರವಾಡ prajakiran.com : ಧಾರವಾಡ ಜಿಲ್ಲೆಯ ಸಕ್ರಿಯ ಕಾಂಗ್ರೆಸ್ ಮುಖಂಡ ಹಾಗೂ ಹಿರಿಯ ನ್ಯಾಯವಾದಿ ಪಿ.ಎಚ್.ನೀರಲಕೇರಿ ಅವರು ಕೆಪಿಸಿಸಿ ವಕ್ತಾರರಾಗಿ ನೇಮಕವಾಗಿದ್ದಾರೆ.
ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಪ್ರಿಯಾಂಕ ಖರ್ಗೆ ಅವರು ಈ ನೇಮಕಾತಿ ಮಾಡಿದ್ದಾರೆ.
ಪಿ.ಎಚ್.ನೀರಲಕೇರಿ ಅವರು ಇದುವರೆಗೂ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸರಕಾರ ಮತ್ತು ಜನಪ್ರತಿನಿಧಿಗಳ ಜನವಿರೋಧಿ ನೀತಿಗಳನ್ನು ಅತ್ಯಂತ ತೀಕ್ಷ್ಣ ಮತ್ತು ಸಮರ್ಥವಾಗಿ ಟೀಕಿಸುತ್ತ ಬಂದಿದ್ದಾರೆ. ಜೊತೆಗೆ ಸರಕಾರದ ವಿರುದ್ದ ನಿರಂತರವಾದ ಹೋರಾಟ ನಡೆಸುತ್ತಾ ಬಂದಿದ್ದಾರೆ.
ಅವರ ಈ ನೇಮಕ ಧಾರವಾಡ ಜಿಲ್ಲೆಯಲ್ಲಿ ಹಾಗೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದರೆ ತಪ್ಪಾಗಲಾರದು.