ಕೆಪಿಎಸ್ಸಿ ಅಧ್ಯಕ್ಷರ ವಿರುದ್ಧ ಹೋರಾಟಕ್ಕೆ ಸಹಕರಿಸಲು ಬೆಲ್ಲದಗೆ ಮನವಿ
ಧಾರವಾಡ ಪ್ರಜಾಕಿರಣ.ಕಾಮ್ : ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಆಯೋಗದ ಕಾರ್ಯದರ್ಶಿ ಹುದ್ದೆಯಲ್ಲಿ ಕೆ.ಎಸ್. ಲತಾಕುಮಾರಿ ಅವರನ್ನು ಮುಂದುವರೆಸಬೇಕು ಎಂದು ಕೆಪಿಎಸ್ಸಿ ಪರೀಕ್ಷಾರ್ಥಿಗಳು ಆಗ್ರಹಿಸಿದರು.
ಅವರು ಶುಕ್ರವಾರ ನಗರದಲ್ಲಿ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ತಮ್ಮ ಸಾಂವಿಧಾನಿಕ ಹುದ್ದೆಯ ದುರುಪಯೋಗ ಮಾಡಿಕೊಂಡು ಎಲ್ಲಾ ನೇಮಕಾತಿ ಪ್ರಕ್ರಿಯೆಗಳ ವಿಳಂಬಕ್ಕೆ ಕಾರಣೀಭೂತರಾಗಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.
ಶಾಸಕ ಅರವಿಂದ ಬೆಲ್ಲದ ಅವರು ಕೂಡ ಪರೀಕ್ಷಾರ್ಥಿಗಳ ಹೋರಾಟಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.