ಅಪರಾಧ

ಬೆಳಗಾವಿ : ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ ನಾಲ್ವರು ಸಹೋದರರು…..!

ಬೆಳಗಾವಿ prajakiran.com : ಬಟ್ಟೆ ತೊಳೆಯಲು ಹೋದ ನಾಲ್ವರು ಕೊಚ್ಚಿ ಹೋದ ಬೆಳಗಾವಿ ಜಿಲ್ಲೆಯ ಅಥಣಿ ಸಮೀಪದ ಕೃಷ್ಣಾ ನದಿಯಲ್ಲಿ ನಡೆದಿದೆ.

ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋದ ನಾಲ್ವರನ್ನು ಸಹೋದರರು ಅಥಣಿ ತಾಲೂಕಿನ ಹಳ್ಯಾಳದವರು ಎಂದು ಗುರುತಿಸಲಾಗಿದೆ‌.

ಅವರಿಗಾಗಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಈಜುಪಟುಗಳು
ಶೋಧ ಕಾರ್ಯ ನಡೆಸುತ್ತಿದ್ದಾರೆ.

ಗೋಪಾಲ ಬನಸುಡೆ (36), ಸದಾಶಿವ ಬನಸುಡೆ (24), ಧರೆಪ್ಪ ಬನಸುಡೆ (22), ಶಂಕರ ಬನಸುಡೆ (20) ನೀರು ಪಾಲಾದವರು ಎಂದು ತಿಳಿದುಬಂದಿದೆ.

ಇವರೆಲ್ಲರೂ ಒಟ್ಟಿಗೆ ಬಟ್ಟೆ ತೊಳೆಯಲು ಹೋದಾಗ ಒಬ್ಬ ನೀರು ಪಾಲಾಗಿದ್ದಾನೆ.

ಆಗ ಅವನನ್ನು ರಕ್ಷಿಸಲು ಹೋದ ಇತರರೂ ನೀರು ಪಾಲಾಗಿದ್ದಾರೆ ಎಂದು ಅಥಣಿ ಪೊಲೀಸರು ತಿಳಿಸಿದ್ದಾರೆ.‌

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *