ಧಾರವಾಡ prajakiran.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಹುಬ್ಬಳ್ಳಿ ಧಾರವಾಡ ನಗರ ಕೆ ಎಸ್ ಆರ್ ಟಿ ಸಿ ಕ್ವಾರ್ಟರ್ಸಿನಲ್ಲಿ ವಾಸಿಸುತ್ತಿರುವ 21 ಸಿಬ್ಬಂದಿಗೆ ನೋಟೀಸ್ ಜಾರಿ ಮಾಡಲಾಗಿದೆ.
ಇನ್ನೂ ಪರೀಕ್ಷಾರ್ಥ ಅವಧಿಯಲ್ಲಿದ್ದ 12 ಜನ ನೌಕರರಿಗೆ ಸೇವೆಯಿಂದ ವಜಾಗೊಳಿಸುವ ನೋಟೀಸ್ ಜಾರಿ ಮಾಡಲಾಗಿದೆ ಎಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಸಂಚಾರ ವ್ಯವಸ್ಥೆ ಕಲ್ಪಿಸಲು ಈಗಾಗಲೇ ನೌಕರರಿಗೆ ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಲಾಗಿದೆ.
ಕೆಲಸ ಮಾಡಲು ನಿರಾಕರಿಸಿದ ನೌಕರರಿಗೆ ಧಾರವಾಡ ವಿಭಾಗ ಘಟಕದಿಂದ ಕ್ವಾರ್ಟರ್ಸ್ ಖಾಲಿ ಮಾಡುವಂತೆ 21 ಜನರಿಗೆ ನೋಟಿಸ್ ನೀಡಲಾಗಿದೆ.
ಅದರಂತೆ ಪರೀಕ್ಷಾರ್ಥ ಅವಧಿಯಲ್ಲಿದ್ದ 12 ಜನ ನೌಕರರಿಗೆ ಸೇವೆಯಿಂದ ವಜಾಗೊಳಿಸುವ ನೋಟೀಸ್ ನೀಡಲಾಗಿದೆ ಎಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.