ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಅತಿ ಮಳೆ : ಕರ್ನಾಟಕ ವಿಶ್ವವಿದ್ಯಾಲಯದ ತರಗತಿಗಳಿಗೆ ರಜೆ

ಧಾರವಾಡ prajakiran.com ಮೇ.20: ಜಿಲ್ಲೆಯಲ್ಲಿ ನಿನ್ನೆಯಿಂದ ಅತಿಯಾದ ಮಳೆ ಆಗುತ್ತಿರುವದರಿಂದ ಕರ್ನಾಟಕ ವಿಶ್ವವಿದ್ಯಾಲಯದ ಎಲ್ಲ ಸ್ನಾತಕೋತ್ತರ ವಿಭಾಗಗಳ ಹಾಗೂ ಅಧೀನ ಕಾಲೇಜುಗಳ ತರಗತಿಗಳಿಗೆ ಇಂದು ಮೇ. 20 ರಂದು ಒಂದು ದಿನದ ರಜೆ ಘೋಷಿಸಿ, ಕುಲಸಚಿವ ಯಶಪಾಲ ಕ್ಷೀರಸಾಗರ ಅವರು ಆದೇಶಿಸಿದ್ದಾರೆ.

ಹವಾಮಾನ ಇಲಾಖೆ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದ್ದು, ಇದೇ ರೀತಿಯಲ್ಲಿ ಮಳೆ ಮುಂದುವರಿದರೆ, ಪರಶೀಲಿಸಿ ಕ್ರಮವಹಿಸಲಾಗುವುದು.

ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಇಂದು ಒಂದು ದಿನ ಮಾತ್ರ ಕವಿವಿಯ ಎಲ್ಲ ವರ್ಗದ ತರಗತಿಗಳಿಗೆ ರಜೆ ನೀಡಲಾಗಿದೆ.

ಮತ್ತು ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಎಂದಿನಂತೆ ಕಚೇರಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *