ನವದೆಹೆಲಿ prajakiran.com: ಕುಂಭಮೇಳದಲ್ಲಿ ಭಾಗವಹಿಸಿದ 2000ಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು ತಗುಲಿದೆ.
ಇದರ ಬೆನ್ನಲ್ಲೇ ಮಧ್ಯಪ್ರದೇಶ, ದೆಹಲಿ, ಒಡಿಶಾ ಸೇರಿದಂತೆ ಹಲವು ರಾಜ್ಯಗಳು ಕುಂಭಮೇಳದಿಂದ ಮರಳುವ ಯಾತ್ರಿಗಳಿಗೆ 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯ ಮಾಡಿದೆ.
ಕುಂಭಮೇಳದಲ್ಲಿ ಭಾಗಿಯಾಗಿ ಹಿಂತಿರುಗುವ ಯಾತ್ರಿಗಳು 14 ದಿನ ಹೋಮ್ ಕ್ವಾರಂಟೈನ್ ಆಗಬೇಕು, ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಸರ್ಕಾರ ಎಚ್ಚರಿಕೆ ನೀಡಿದೆ.
ದೆಹಲಿಯಿಂದ ಹೋಗಿ ಕುಂಭಮೇಳದಲ್ಲಿ ಪಾಲ್ಗೊಂಡವರು ತಮ್ಮ ಮಾಹಿತಿಯನ್ನು ಸರ್ಕಾರದ ವೆಬ್ ಸೈಟ್ ಗೆ ನೀಡಬೇಕು.
ಮಾಹಿತಿ ನೀಡದಿದ್ದಲ್ಲಿ ಅವರನ್ನು ಸಾಂಸ್ಥಿಕ ಸಂಪರ್ಕ ತಡೆ ಕೇಂದ್ರಕ್ಕೆ ಕಳುಹಿಸಲಾಗುತ್ತದೆ ಎಂದು ಎಚ್ಚರಿಸಿದೆ.