ಬೆಂಗಳೂರು ಪ್ರಜಾಕಿರಣ. ಕಾಮ್ : ರಾಜ್ಯ ಸರಕಾರ ನಾಲ್ಕು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮೀಷನರ್ ಲಾಬುರಾಮ್ ಅವರನ್ನೂ ವರ್ಗಾವಣೆ ಮಾಡಲಾಗಿದೆ.
ಅವರ ಸ್ಥಳಕ್ಕೆ ರಮಣಗುಪ್ತ ಅವರನ್ನು ನೂತನ ಪೊಲೀಸ್ ಆಯುಕ್ತರಾಗಿ ಸರ್ಕಾರ ವರ್ಗಾವಣೆ ಮಾಡಿದೆ.
ಅವಳಿನಗರದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸಿದ ಲಾಬುರಾವ್ ಅವರು ಜನಸಾಮಾನ್ಯರ ಅಳಲುನ್ನು ನೇರವಾಗಿ ಆಲಿಸುತ್ತಿದ್ದರು.
ಅಲ್ಲದೆ, ಪೊಲೀಸ್ ಅಧಿಕಾರಿ ವರ್ಗದವರು ಸದಾಕಾಲವೂ ಸಕಾರಾತ್ಮಕವಾಗಿ ಸ್ಪಂದಿಸುವಂತೆ ನೋಡಿಕೊಳ್ಳುತ್ತಿದ್ದರು.
ಅವಳಿನಗರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಜನರಿಗೆ ಪೊಲೀಸ್ ವ್ಯವಸ್ಥೆ ಮೇಲೆ ನಂಬಿಕೆ ಮೂಡುವಂತೆ ಮಾಡಿದ್ದರು.