ಜಿಲ್ಲೆ

ಮಾಜಿ ಸಚಿವ ಸಂತೋಷ ಲಾಡ ಆಪ್ತನ ಭೇಟಿ ಮಾಡಿದ ಯುಥ್ ಕಾಂಗ್ರೆಸ್ ಅಧ್ಯಕ್ಷ

ಧಾರವಾಡ prajakiran.com : ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಹಾಗೂ ಮಾಜಿ ಎಂಎಲ್ಸಿ ನಾಗರಾಜ ಛಬ್ಬಿ ನಡುವೆ ಆರಂಭಗೊಂಡಿರುವ ಪೈಪೋಟಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸಂಕಷ್ಟ ತಂದಿಟ್ಟಿದೆ.

ಅದರಲ್ಲೂ ಕಲಘಟಗಿ ಕ್ಷೇತ್ರದ ಮೇಲೆ ಕಣ್ಣು ಹಾಕಿರುವ ಛಬ್ಬಿ ಬಣ
ಅವರು ನಮ್ಮವರು, ಇವರು ನಮ್ಮವರು. ಇದು ನಮ್ಮ ಜಯ ಎಂದು ಬಿಂಬಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅಳ್ನಾವರ ಬ್ಲಾಕ್ ನ ಯುವ ಕಾಂಗ್ರೆಸ್ ಅಧ್ಯಕ್ಷ ಇಮ್ರಾನ್
ಮಾಜಿ ಸಚಿವ ಸಂತೋಷ ಲಾಡ ಆಪ್ತ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಾಜಿ ನಿರ್ದೇಶಕ ಆನಂದ ಕಲಾಲ್ ಅವರನ್ನ ಭೇಟಿ ಮಾಡಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಮಾಜಿ ಸಚಿವ ಸಂತೋಷ ಲಾಡ ಆಪ್ತ ಆನಂದ ಕಲಾಲರ ಧಾರವಾಡದ ದ್ವಾರಕಕ್ಕೆ ಆಗಮಿಸಿ ಯುವ ಕಾಂಗ್ರೆಸ್ ಮತ್ತಷ್ಟು ಗಟ್ಟಿ ಗೊಳಿಸುವ ಬಗ್ಗೆ ಹಾಗೂ ಕಲಘಟಗಿ ಕ್ಷೇತ್ರದಲ್ಲಿ ಯುವ ಪಡೆ ಸಜ್ಜುಗೊಳಿಸುವ ಕುರಿತು
ಮಾತನಾಡಿರುವುದು
ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಳ್ಳುವ ವಿಶ್ವಾಸ ಮೂಡಿಸಿದೆ.

ಇಮ್ರಾನ್ ಅವರಿಗೆ, ಆನಂದ ಕಲಾಲ ಕೂಡಾ ಅಗತ್ಯ ಬೆಂಬಲ ನೀಡುವುದಾಗಿ ಹೇಳಿದರು.

ಈ ವೇಳೆ ಪ್ರಜಾಕಿರಣ.ಕಾಮ್ ಜೊತೆಗೆ ಮಾತನಾಡಿದ ಆನಂದ ಕಲಾಲ ಅವರು, ಮಾಜಿ ಸಚಿವ ಸಂತೋಷ ಲಾಡ ಅವರನ್ನ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ. ಅದಕ್ಕೆ ಪೂರಕವಾಗಿ ನಾವೆಲ್ಲರೂ ಕೂಡಿಕೊಂಡು ಮುಂದೆ ನಡೆಯಬೇಕಿದೆ ಎಂದು ಹೇಳಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *