ಧಾರವಾಡ ಪ್ರಜಾಕಿರಣ.ಕಾಮ್ :ಧಾರವಾಡ ಗ್ರಾಮಿಣ ಪೊಲೀಸ್ ಠಾಣೆ ಇನ್ಸಪೆಕ್ಟರ್ ಮಂಜುನಾಥ ಕುಸುಗಲ್ ವಿರುದ್ಧ ಮಹಿಳಾ ವಕೀಲರ ಜೊತೆಗೆ ಅಸಭ್ಯ ವರ್ತನೆ ತೋರಿದ ಕುರಿತು ಧಾರವಾಡ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣದ ಆರೋಪಿಯನ್ನು ಬಂಧಿಸಬೇಕು ಹಾಗೂ ಆತನನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಧಾರವಾಡ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸಭೆ ಸೇರಿ ತೀವ್ರ ಸ್ವರೂಪದ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ, ಮಹಿಳಾ ವಕೀಲ ರೊಂದಿಗೆ ಅನುಚಿತವಾಗಿ ವರ್ತಿಸಿದ ಧಾರವಾಡ ಗ್ರಾಮೀಣ ಸಿಪಿಐ ಮಂಜುನಾಥ್ ಕುಸುಗಲ್ಲ ಮೇಲೆ ಸೂಕ್ತ ಕ್ರಮ ಜರುಗಿಸಲು ಒತ್ತಾಯಿಸಿ ಜುಬ್ಲಿ ಸರ್ಕಲ್ ನಲ್ಲಿ ಧಾರವಾಡ ವಕೀಲರ ಸಂಘದ ನೇತ್ರತ್ವದಲ್ಲಿ ದಿಢೀರ್ ರಸ್ತೆ ತಡೆ ನಡೆಸಲಾಯಿತು.
ಇದರಿಂದಾಗಿ ಮೂರು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು. ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ
ಡಿಸಿಪಿ ವಕೀಲರ ಮನವೊಲಿಸುವ ಪ್ರಯತ್ನ ಮಾಡಿದರು.
ಬಳಿಕ ಎಸ್ಪಿ ಕಚೇರಿಗೆ ತೆರಳಿ
ಅಮಾನತ್ತುಗೊಳಿಸಲು ಆಗ್ರಹಿಸಿ ಧಾರವಾಡ ವಕೀಲರ ಸಂಘದಿಂದ ಮನವಿ ಸಲ್ಲಿಸಲಾಯಿತು.