ರಾಜ್ಯ

ವೇದಿಕೆ ಹಂಚಿಕೊಂಡರೂ ಮುಖ ಸಿಂಡರಿಸಿಕೊಂಡ ಸಚಿವ-ಶಾಸಕಿ

ಬೆಳಗಾವಿ prajakiran.com  :  ಕುಂದಾನಗರಿ ಬೆಳಗಾವಿ ರಾಜಕಾರಣದ ಕೇಂದ್ರ ಬಿಂದುಗಳಾದ ಸಚಿವ ರಮೇಶ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಶುಕ್ರವಾರ ಒಂದೇ ವೇದಿಕೆ ಹಂಚಿಕೊಂಡರೂ ಇಬ್ಬರು ಪರಸ್ಪರ ಮುಖ ನೋಡದೆ ತಮ್ಮ ಮುಖ ಸಿಂಡರಿಸಿಕೊಂಡು ಕುಳತಿಸಿದ್ದರು.

 ಸಚಿವ-ಶಾಸಕಿ ಕುಳಿತ ಭಂಗಿ ಕಂಡು ಎದುರಿಗಿದ್ದ ಜನತೆ, ಹಿಂಬಾಲಕರು, ಬೆಂಬಲಿಗರು ಹಾಗೂ ವಿಶೇಷವಾಗಿ ಅಧಿಕಾರಿಗಳು ಮುಸಿ ಮುಸಿ ನಗುತ್ತಿದ್ದರು.



ನಮ್ಮ  ಅಕ್ಕ ಮತ್ತು ಸಾಹುಕಾರ ನಾನು ಒಂದು ತೀರಾ ನೀನು ಒಂದು ತೀರಾ…ಕಥೆ.. ಎಂಬಂತಾಗಿದೆ ಎಂದು ಅಂದುಕೊಳ್ಳುತ್ತಿರುವುದು ಕಂಡು ಬಂತು.

ಇದಕ್ಕೆ ಸಾಕ್ಷಿಯಾಗಿದ್ದು ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ ದಿನಸಿ ಕಿಟ್ ಗಳನ್ನು ವಿತರಿಸಿದ ಸಮಾರಂಭ ಮೌನ ಸಾಕ್ಷಿಯಾಯಿತು.

ವಿಶೇಷವೆಂದರೆ ಈ ಸಮಾರಂಭದಲ್ಲಿ ಉಪಸ್ಥಿತರಿದ್ದ ಕೇಂದ್ರ ರಾಜ್ಯ ರೈಲ್ವೆ ಸಚಿವರಾದ ಸುರೇಶ್ ಅಂಗಡಿ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ ಯಾರೊಬ್ಬರು ಚಕಾರವೆತ್ತಲಿಲ್ಲ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *