ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ #LekkaKodi ಎಂಬ ಹ್ಯಾಷ್ ಟ್ಯಾಗ್ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಿದೆ.
ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೊ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿನಂತಿ ಮಾಡಿದ್ದಾರೆ.
#LekkaKodi ರಾಜ್ಯ ಸರಕಾರ ಕೋವಿಡ್ ಸೋಂಕಿತರ ಆರೈಕೆಗೆ ಈವರೆಗೆ ಎಷ್ಟು ಖರ್ಚು ಮಾಡಿದೆ ಕೇಂದ್ರ ಸರಕಾರ ರಾಜ್ಯಕ್ಕೆ ಎಷ್ಟು ಅನುದಾನ ನೀಡಿದೆ. ರಾಜ್ಯದ ಯಾವ ಇಲಾಖೆ ಯಾವ ಬಾಬತ್ತಿಗೆ ಎಷ್ಟು ಹಣ ಖರ್ಚು ಮಾಡಿದೆ ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ, ವೈದ್ಯಕೀಯ ಉಪಕರಣಗಳಾದ ಥರ್ಮಲ್ ಸ್ಕ್ಯಾನರ್, ಮಾಸ್ಕ್, ಸ್ಯಾನಿಟೇಶರ್ ಯಾವ ಕಂಪನಿಯಿಂದ ಹಾಗೂ ಎಷ್ಟು ಖರೀದಿಸಿದ್ದಿರಿ.
ಈವರೆಗೆ ಎಷ್ಟು ಜನರಿಗೆ ಫುಡ್ ಕಿಟ್ ಕೊಟ್ಟಿರಿ, ಯಾರಿಂದ ಪಡೆದಿದ್ದಿರಿ, ಪ್ರತಿ ಕಿಟ್ ಗೆ ಎಷ್ಟು ಹಣ ಖರ್ಚಾಗಿದೆ ಜಿಲ್ಲೆ, ತಾಲೂಕು, ವಾರ್ಡ್ ವಾರು ವಿವರ ನೀಡಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಅಲ್ಲದೆ, ಕೋವಿಡ್ ಪರಿಹಾರ ಪ್ಯಾಕೇಜ್ ಯಾವ ಸಮುದಾಯಕ್ಕೆ ಎಷ್ಟು ಹಣ ಬಿಡುಗಡೆ ಮಾಡಿದ್ದಿರಿ ಎಂಬುದು ತಿಳಿಸಿ. ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು, ಲೆಕ್ಕ ಕೊಡುವುದು ನಿರ್ಮ ಕರ್ತವ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಆರಂಭಿಸಿರುವ ಈ ಲೆಕ್ಕ ಕೊಡಿ ಸಾಮಾಜಿಕ ಜಾಲತಾಣದಅಭಿಯಾನಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಹಾಗೂ ಅವರ ಮಂತ್ರಿ ಮಂಡಲ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಬರುವ ದಿನಗಳಲ್ಲಿ ಕಾದು ನೋಡಬೇಕಿದೆ.