ರಾಜ್ಯ

ಗಜೇಂದ್ರಗಡ ಗೊಬ್ಬರ ಅಂಗಡಿ ಪರವಾನಿಗೆ ಅಮಾನತು

ಮಂಜುನಾಥ ಸಿಂಗ್ ರಾಠೋಢ

ಗದಗ prajakiran.com : ರಾಜ್ಯ ಸರ್ಕಾರ ನಿಗದಿಪಡಿಸಿದ ಮಾರಾಟ ಬೆಲೆಗಿಂತ ಹೆಚ್ಚಿನ ದರದಲ್ಲಿ ಯೂರಿಯಾ ರಸಗೊಬ್ಬರ ಮಾರಾಟ ಎಲ್ಲಡೆ ಎಗ್ಗಿಲ್ಲದೆ ನಡೆಯುತ್ತಿದೆ.

ಅಗಸ್ಟ 14 ರಂದು ಗಜೇಂದ್ರಗಡದ ಶ್ರೀ ಮಹಾಂತೇಶ ಆಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ)ಗದಗ ಹಾಗೂ ಸಹಾಯಕ ಕೃಷಿ ನಿರ್ದೇಶಕರು ರೋಣ ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು.

ರಸಗೊಬ್ಬರಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲಿಸಿದಾಗ ಮಾರಾಟ ಮಳಿಗೆಯ ಲೈಸನ್ಸ್ದಾರರು ಹೆಚ್ಚಿನ ದರಕ್ಕೆ ಯೂರಿಯಾ ರಸಗೊಬ್ಬರವನ್ನು ಮಾರಾಟ ಮಾಡಿರುವುದು ದೃಢಪಟ್ಟಿದೆ.

ಕೃಷಿ ಪರಿಕರ ಮಾರಾಟ ಮಳಿಗೆಯ ಲೈಸನ್ಸ್‍ದಾರರು ರಸಗೊಬ್ಬರ ನಿಯಂತ್ರಣ ಆಜ್ಞೆ 1985 ರ ನಿಯಮ 3 (3) ಉಲ್ಲಂಘನೆ ಮಾಡಿರುವುದು ಕಂಡು ಬಂದ ಶ್ರೀ ಮಹಾಂತೇಶ ಆಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಯ ಪರವಾನಿಗೆಯನ್ನು ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಲಾದೆ ಎಂದು ಗದಗ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕರು ( ಜಾರಿದಳ)ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *