ಬೆಂಗಳೂರು prajakoran.com : ರಾಜ್ಯದಲ್ಲಿ ಎರಡನೇ ಅಲೆಯ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದ್ದು, ಕಳೆದ ಒಂದು ತಿಂಗಳಿಂದ ಜನ ಮನೆಯಲ್ಲೇ ಕಾಲಕಳೆಯುವಂತಾಗಿದೆ.
ನಾಡಿನ ಕೋಟ್ಯಾಂತರ ಜನರ ಜೀವನ ಅಕ್ಷರಶಃ ಬೀದಿಗೆ ಬಿದ್ದಿದೆ.
ಇನ್ನೂ ಜೂನ್. 7ರ ವರೆಗೆ ಲಾಕ್ಡೌನ್ ಜಾರಿಯಲ್ಲಿದೆ. ಆದರೆ ಜೂನ್ 7ರ ನಂತರವೂ ಲಾಕ್ಡೌನ್ ಮುಂದುವರೆಸುವ ಮಾತುಗಳು ಕೇಳಿಬರುತ್ತಿವೆ.
ಕೊರೋನಾ ಸೋಂಕನ್ನು ಸಂಪೂರ್ಣ ತಡೆಗಟ್ಟಲು ಜೂನ್.7ರ ನಂತರವೂ ಲಾಕ್ಡೌನ್ ಮುಂದುವರೆಸುವ ಅವಶ್ಯಕತೆ ಇದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಹೀಗಾಗಿ ಲಾಕ್ಡೌನ್ ಮುಂದುವರಿಕೆ ಬಹುತೇಕ ಕಚಿತ ಎಂದು ಹೇಳಲಾಗುತ್ತಿದೆ.