ರಾಜ್ಯ

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ,10 ಸಾವಿರ ರೂ. ದಂಡ ವಿಧಿಸಿದ ಧಾರವಾಡ ನ್ಯಾಯಾಲಯ

ಧಾರವಾಡ prajakiran.com : 2018ರ ಫೆಬ್ರವರಿ 13 ರ ರಾತ್ರಿ ನಗರದ ಕೋಳಿಕೇರಿ ಪ್ರದೇಶದ ಕೆರೆಕಟ್ಟೆ ಹತ್ತಿರದ ಆವರಣದಲ್ಲಿ ಈರಪ್ಪ ಎಂಬ ವ್ಯಕ್ತಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ವಿನಾಯಕ ಮನಿಯಾರಕರ್ ಎಂಬುವವರ ಅಪರಾಧ ಸಾಬೀತಾಗಿದೆ.

ಈ ಹಿನ್ನೆಲೆಯಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಧಾರವಾಡದ ಎರಡನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ  ಶ್ರೀಮತಿ ಎಂ. ಪಂಚಾಕ್ಷರಿ ಅವರು ಫೆ.1ರಂದು ತೀರ್ಪು ಪ್ರಕಟಿಸಿದ್ದಾರೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಯ ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಸರೋಜಾ ಹೊಸಮನಿ ವಾದ ಮಂಡಿಸಿದ್ದರು.

ಧಾರವಾಡ ಶಹರ ಉಪ ವಿಭಾಗದ ಎ.ಸಿ.ಪಿ ಯಾಗಿದ್ದ ಎಮ್.ಎನ್.ರುದ್ರಪ್ಪ ಪ್ರಕರಣದ ತನಿಖೆ ಕೈಗೊಂಡಿದ್ದರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *