ಧಾರವಾಡ prajakiran.com : 2018ರ ಫೆಬ್ರವರಿ 13 ರ ರಾತ್ರಿ ನಗರದ ಕೋಳಿಕೇರಿ ಪ್ರದೇಶದ ಕೆರೆಕಟ್ಟೆ ಹತ್ತಿರದ ಆವರಣದಲ್ಲಿ ಈರಪ್ಪ ಎಂಬ ವ್ಯಕ್ತಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ವಿನಾಯಕ ಮನಿಯಾರಕರ್ ಎಂಬುವವರ ಅಪರಾಧ ಸಾಬೀತಾಗಿದೆ.
ಈ ಹಿನ್ನೆಲೆಯಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಧಾರವಾಡದ ಎರಡನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಎಂ. ಪಂಚಾಕ್ಷರಿ ಅವರು ಫೆ.1ರಂದು ತೀರ್ಪು ಪ್ರಕಟಿಸಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಯ ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಸರೋಜಾ ಹೊಸಮನಿ ವಾದ ಮಂಡಿಸಿದ್ದರು.
ಧಾರವಾಡ ಶಹರ ಉಪ ವಿಭಾಗದ ಎ.ಸಿ.ಪಿ ಯಾಗಿದ್ದ ಎಮ್.ಎನ್.ರುದ್ರಪ್ಪ ಪ್ರಕರಣದ ತನಿಖೆ ಕೈಗೊಂಡಿದ್ದರು.