ರಾಜ್ಯ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಿದ್ದರೆ ಬಿಜೆಪಿಗೆ ತಕ್ಕ ಪಾಠ

ಹುಬ್ಬಳ್ಳಿ prajakiran.com : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಿದ್ದರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗುತ್ತದೆ ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಅವರು ಶನಿವಾರ ಹುಬ್ಬಳ್ಳಿಯಲ್ಲಿ ಬೃಹತ್ ರ್‍ಯಾಲಿ ಹಾಗೂ ಧರಣಿ ಸತ್ಯಾಗ್ರಹಕ್ಕೂ ಮೊದಲು ನೆಹರೂ ಮೈದಾನದಲ್ಲಿ ನೆರೆದಿದ್ದ ಸಮಾಜ ಬಾಂಧವರನ್ನು ಉದ್ದೇಶಿಸಿ ಮಾತನಾಡಿದರು.
ಈಗಾಗಲೇ ಸರ್ಕಾರ ಮೂರು ಬಾರಿ ಮೀಸಲಾತಿ ಕೊಡುವ ಭರವಸೆ ನೀಡಿ ಮಾತು ತಪ್ಪಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಮುಂದೆ ಹೋರಾಟ ಆರಂಭಿಸುವ ಎಚ್ಚರಿಕೆ ನೀಡಿದಾಗ ಮುಖ್ಯಮಂತ್ರಿಗಳು ಸಮಾಜದ ಸಚಿವರ ಮೂಲಕ ಮತ್ತೊಮ್ಮೆ ಒಂದು ತಿಂಗಳ ಕಾಲಾವಕಾಶ ಕೇಳಿದ್ದರು.
ನಾಲ್ಕನೇ ಬಾರಿ ಮೀಸಲಾತಿ ಕೊಡುವ ಭರವಸೆ ನೀಡಿದೆ. ಇದನ್ನು ಸರ್ಕಾರಕ್ಕೆ ನೆನಪಿಸುವ ಹಿನ್ನೆಲೆಯಲ್ಲಿ ಈ ಹೋರಾಟ ನಡೆಸಲಾಗುತ್ತಿದೆ ಎಂದರು.
ಸರ್ಕಾರ ಅಗಸ್ಟ್ 22 ರೊಳಗೆ ಸಮಾಜಕ್ಕೆ ಮೀಸಲಾತಿ ಕೊಡುವ ವಿಶ್ವಾಸವಿದೆ. ಒಂದು ವೇಳೆ ಮೀಸಲಾತಿ ಸಿಗದೇ ಹೋದಲ್ಲಿ ಮಾಡು ಇಲ್ಲವೇ ಮಡಿ ಎಂಬಂತೆ ಬೆಂಗಳೂರಿನಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಬೃಹತ್ ಹೋರಾಟ ಮಾಡಲಾಗುವುದು ಎಂದರು.
ರಾಜ್ಯದ ಬಿಜೆಪಿ ಸರ್ಕಾರದಿಂದ
ಕೇವಲ ಮೂಗಿಗೆ ತುಪ್ಪ ಸವರುವ ಕೆಲಸ ನಡೆದಿದೆ ಎಂದರು.

ವಿಶೇಷ ವೆಂದರೆ ಈ ಹೋರಾಟದಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *