ಧಾರವಾಡ prajakiran.com ಡಿ.10 : ಕರ್ನಾಟಕ ವಿಧಾನ ಪರಿಷತ್ತಿನ ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆಯು ಡಿಸೆಂಬರ್ 14 ರಂದು ಕೃಷಿ ವಿ.ವಿ.ಯಲ್ಲಿ ಜರುಗಲಿದೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್ 13 ರ ಮಧ್ಯರಾತ್ರಿ 11:59 ಗಂಟೆಯಿಂದ ಡಿಸೆಂಬರ್ 14 ಮಧ್ಯರಾತ್ರಿ 11:59 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯದ ಅಂಗಡಿ, ಬಾರ್ ಗಳನ್ನು ಬಂದ್ ಮಾಡಬೇಕು.
ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು, ಮದ್ಯಸಾಗಾಣೆ, ಸಂಗ್ರಹಣೆ ನಿಷೇಧಿಸಿ ಹಾಗೂ ಮದ್ಯಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಿತೇಶ ಕೆ. ಪಾಟೀಲ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 (ಸಿ) ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಈ ಆದೇಶ ಹೊರಡಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಉಪ ಅಧೀಕ್ಷಕರು ಹಾಗೂ ವಿಚಕ್ಷಕದಳದ ಅಧಿಕಾರಿಗಳು ಈ ಆದೇಶ ಜಾರಿಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.