ಧಾರವಾಡ prajakiran.com ಅ.18 : ಜಿಲ್ಲೆಯಲ್ಲಿ ಆ.20 ರಂದು ಮೊಹರಂ ಹಬ್ಬದ ಆಚರಣೆ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಇಂದು ( ಆ.18) ಸಂಜೆ 6 ಗಂಟೆಯಿಂದ ಆ.21 ರ ಬೆಳಗಿನ 6 ಗಂಟೆಯವರೆಗೆ ಮದ್ಯಪಾನ,ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು,ಬಿಯರ್ ಬಾರ್ಗಳು,ಕ್ಲಬ್ಗಳು ಮತ್ತು ಮದ್ಯದ ಡಿಪೋಗಳು ಈ ನಿಷೇಧಾಜ್ಞೆ ಅವಧಿಯಲ್ಲಿ ಮುಚ್ಚಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.