*ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ಆರೋಪಿ ಅರೆಸ್ಟ್*
*ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ*
*ಪೊಲೀಸರ ನಡೆ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರದ ಆಕ್ರೋಶ*
*ಲವ್ ಜಿಹಾದ್ ಗ್ಯಾರಂಟಿ ಭಾಗ್ಯ ಎಂದು ಶಾಸಕ ಅರವಿಂದ ಬೆಲ್ಲದ ಕಿಡಿ*
ಹುಬ್ಬಳ್ಳಿ ಪ್ರಜಾಕಿರಣ. ಕಾಮ್ : ಅಪ್ರಾಪ್ತೆಯನ್ನು ಪ್ರೀತಿ, ಪ್ರೇಮ,ಪ್ರಣಯ ಎಂದು ನಂಬಿಸಿ ಆಕೆಯ
ಮೇಲೆ ಅತ್ಯಾಚಾರ ನಡೆಸಿದ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ಸದ್ದಾಂ ಹುಸೇನ್ ಎಂಬ ಯುವಕನೇ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆಕೆಯ ಪೋಷಕರು ಆತನ ವಿರುದ್ಧ ದೂರು ನೀಡಿದ್ದಾರೆ.
ಆದರೆ ನವನಗರ ಎಪಿಎಂಸಿ ಠಾಣೆ ಮುಂದೆ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಲವ್ ಜಿಹಾದ್ ಎಂದು ಕಿಡಿ ಕಾರಿ ಪೊಲೀಸರ ನಡೆ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಗುಡುಗಿದರು.
ಪ್ರಕರಣ ದಾಖಲಾದ ಒಂದು ಗಂಟೆಯ ಒಳಗೆ ಆರೋಪಿ ಸದ್ದಾಂಹುಸೇನ್ ಹೆಡೆಮುರಿ ಕಟ್ಟಲಾಗಿದೆ ಎಂದು ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಖಚಿತಪಡಿಸಿದ್ದಾರೆ.
ಅಲ್ಲದೆ, ಇದೇವೇಳೆ ಧಾರವಾಡ ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಇದು ರಾಜ್ಯದ ಕಾಂಗ್ರೆಸ್ ಪಕ್ಷದ ಆರನೇ
ಗ್ಯಾರಂಟಿ ಭಾಗ್ಯ ಲವ್ ಜಿಹಾದ್ ಎಂದು ಆರೋಪಿಸಿದರು.
ಹಿಂದುಳಿದ ಹಾಗೂ ದಲಿತರ ಮತ ಪಡೆದು ಅಲ್ಪಸಂಖ್ಯಾತರನ್ನ ಓಲೈಸುತ್ತಾರೆ ಎಂದು ದೂರಿದ್ದಾರೆ.