ಧಾರವಾಡ prajakiran.com : ರಾಜ್ಯದ ಕಾರ್ಮಿಕ ಇಲಾಖೆಯಿಂದ ಬಡ ಕೂಲಿ ಕಾರ್ಮಿಕರಿಗೆ ವಿತರಿಸಲು ಸರಬರಾಜು ಮಾಡಿರುವ ದವಸ ಧಾನ್ಯಗಳ ಕಿಟ್ ಗಳನ್ನು ಧಾರವಾಡದ ಸವದತ್ತಿ ರಸ್ತೆಯಲ್ಲಿರುವ ಮೋಹನ ಅಷ್ಟಗಿ ಮಾಲೀಕತ್ವದ ಶ್ರೀ ಪದ್ಮಾವತಿ ಕಾಟನ್ ಇಂಡ್ರಸ್ಟ್ರಿ ಕಾರ್ಮಿಕರಿಗೆ ಶನಿವಾರ ವಿತರಣೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಶಾಸಕ ಅಮೃತ ದೇಸಾಯಿ ಹಾಗೂ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಅವರು, ವಿಶ್ವದೆಲ್ಲಡೆ ಕರೋನಾ ಮಹಾಮಾರಿ ಉಲ್ಬಣಿಸಿದ ಪರಿಣಾಮ ದೇಶದ ಕೋಟ್ಯಾಂತರ ಜನ ತತ್ತರಿಸಿ ಹೋಗಿದ್ದಾರೆ.
ಇದನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸತತ ಪ್ರಯತ್ನ ಮಾಡುತ್ತಿದೆ. ಇದರಿಂದಾಗಿ ಸಾಧ್ಯವಾದಷ್ಟು ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಆದ್ದರಿಂದ ಎಲ್ಲರೂ ಇದಕ್ಕೆ ಕೈ ಜೋಡಿಸಿ ಪರಿಸರದ ಸ್ವಚ್ಛತೆ ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಈ ವೇಳೆ ಸುಮಾರು ೧೦೦ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಕುಂದಗೋಳಮಠ, ಗುರುನಾಥಗೌಡ ಗೌಡರ, ಸಂಗನಗೌಡ ರಾಮನಗೌಡರ, ಜಿಪಂ ಮಾಜಿ ಅಧ್ಯಕ್ಷೆ ಕಸ್ತೂರಿ ಅಷ್ಟಗಿ, ನಾಗರಾಜ ಗಾಣಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.