ಬೆಂಗಳೂರು prajakiran.com : ರಾಜ್ಯದಲ್ಲಿ ಕೊರೋನಾ ಎರಡನೇ ತಗ್ಗಿಸಲು ಮೇ 24ರ ವರೆಗೆ ಲಾಕ್ಡೌನ್ ಜಾರಿಮಾಡಲಾಗಿತ್ತು. ಅದರಂತೆ ಹೊಸ ಸೋಂಕಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ.
ಈ ಹಿನ್ನೆಲೆ ಈಗ ಜಾರಿಗೊಳಿಸಿದ ಲಾಕ್ಡೌನ್ ಮೇ.24ಕ್ಕೆ ಮುಕ್ತಾಯವಾಗಲಿದೆ.
ಕೊರೋನಾ ಸೋಂಕು ಹರಡುವುದನ್ನು ಸಂಪೂರ್ಣವಾಗಿ ತಡೆಗಟ್ಟಲು ಲಾಕ್ಡೌನ್ ವಿಸ್ತರಣೆ ಕುರಿತು ನಾಳೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಲಾಕ್ಡೌನ್ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.