ಲಸಿಕಾ ಕೇಂದ್ರಕ್ಕೆ ತೆರಳಲು ಸಮಯ ನಿಗದಿಯಾಗಿರುವ ಸಂದೇಶ ಕಡ್ಡಾಯ
ಬೆಂಗಳೂರು prajakiran.com : ಇಂದಿನಿಂದ 18 ರಿಂದ 44ವರ್ಷ ವಯೋಮಾನದವರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದ್ದು, ಲಸಿಕಾ ಕೇಂದ್ರಕ್ಕೆ ತೆರಳುವವರ ಬಳಿ ಲಸಿಕೆ ಪಡೆಯುವ ಸಮಯ ನಿಗದಿಯಾಗಿರುವ ಎಸ್ ಎಂ ಎಸ್ ಸಂದೇಶ ಇರುವುದು ಕಡ್ಡಾಯವಾಗಿದೆ.
ಈ ಎಸ್ ಎಂಎಸ್ ಪರಿಶೀಲಿಸಿದ ಬಳಿಕವಷ್ಟೇ ಪೊಲೀಸರು ಲಸಿಕಾ ಕೇಂದ್ರಕ್ಕೆ ತೆರಳಲು ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಇಂದಿನಿಂದ ರಾಜ್ಯಾದ್ಯಂತ ಕಟ್ಟು ನಿಟ್ಟಿನ ಲಾಕ್ ಡೌನ್ ಜಾರಿಯಾಗಿದ್ದರಿಂದ ಲಸಿಕೆ ಪಡೆಯಲು ಹೋಗುವವರಿಗೆ ಲಾಕ್ ಡೌನ್ ನಿಯಮ ಅಡ್ಡಿಯಾಗಬಾರದೆಂಬ ಕಾರಣಕ್ಕೆ ಸಂದೇಶವನ್ನೇ ಪಾಸ್ ರೀತಿ ಬಳಸಲು ಅವಕಾಶ ನೀಡಲಾಗಿದೆ.
ಬೆಳ್ಳಂಬೆಳಿಗ್ಗೆ ಕಾರ್ಯಾರಂಭ ಮಾಡಿದ ಪೋಲಿಸರು
ಚಿಕ್ಕಮಗಳೂರು Prajakiran.com : ರಾಜ್ದಲ್ಲಿ ಹೆಚ್ಚುತ್ತಿರುವ ಸೋಂಕನ್ನು ತಡೆಗಟ್ಟಲು ಇಂದಿನಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ಕಾಫಿನಾಡು ಚಿಕ್ಕಮಗಳೂರು ಸೇರಿದಂತೆ ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಲಾಕ್ ಡೌನ್ ಕಾರಣದಿಂದ ಜನಜೀವನ ಬಹುತೇಕ ಸ್ಥಗಿತಗೊಂಡಿದೆ.
ನಗರ, ಪಟ್ಟಣಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಾರ್ವಜನಿಕರು ನಡೆದು ಬರುತ್ತಿರುವ ದೃಶ್ಯಗಳು ಕಂಡುಬಂತು. ವಾಹನಗಳಲ್ಲಿ ಬಂದವರಿಗೆ ಪೊಲೀಸರ ದಿದ ಕಾನೂನು ಕ್ರಮ ಕೈಗೊಂಡರು.
ಪೊಲೀಸರು ಧ್ವನಿವರ್ದಕಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ವಿನಾಕರಣ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡುತ್ತಿದ್ದು, ಸುಮ್ಮನೆ ತಿರುಗಾಡುವವರಗೆ ಪೊಲೀಸರು ಲಾಠಿ ಏಟು ನೀಡುತ್ತಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗ್ಗೆ ನಗರ ಪಟ್ಟಣಗಳಲ್ಲಿ ಜನ ಸಂಚಾರ ವಿರಳವಾಗಿದ್ದು, ರಸ್ತೆಗಳು ಬಿಕೊ ಎನ್ನುತ್ತಿವೆ.