ಧಾರವಾಡ ಪ್ರಜಾಕಿರಣ.ಕಾಮ್ :
ಕುಂದಗೋಳ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ವಿದ್ಯಾ ಕುಂದರಗಿಯವರ ಧಾರವಾಡ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಕುಂದಗೋಳ ಬಿಇಓ ಆಗಿರುವ ಡಾ. ವಿದ್ಯಾ ಕುಂದರಗಿಯವರ ಧಾರವಾಡದ ಹೊಯ್ಸಳ ನಗರದಲ್ಲಿನ ನಿವಾಸದ ಮೇಲೆ ಈ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಧಾರವಾಡ ಜಿಲ್ಲೆಯ
ಎಸ್ಪಿ ಸತೀಶ ಚಿಟಗುಬ್ಬಿ ನೇತೃತ್ವದಲ್ಲಿ ದಾಳಿ ನಡೆದಿದೆ.
ಕುಂದಗೋಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಆಗಿರುವ ಕುಂದರಗಿಯವರು
ಮಂಜುನಾಥ ಕುರುವಿನಶೆಟ್ಟಿ ಎಂಬುವವರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಮಂಜುನಾಥ, ಹರ್ಲಾಪುರ ಗ್ರಾಮದ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದರು.
ಇದರಿಂದ ನೊಂದ ಮಂಜುನಾಥ ಲೋಕಾಯುಕ್ತ ಮೊರೆ ಹೋಗಿದ್ದರು.
ಇಂದು 8 ಸಾವಿರ ರೂ. ಲಂಚ ಪಡೆಯುವಾಗ ಬಿಇಒ
ಸಿಕ್ಕಿಬಿದ್ದಿದ್ದಾರೆ.
ಈ ಹಿನ್ನೆಲೆಯಲ್ಲಿ ಧಾರವಾಡದ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯಲ್ಲಿಯ ದಾಖಲೆಗಳನ್ನು ಲೋಕಾಯುಕ್ತರು
ಪರಿಶೀಲನೆ ನಡೆಸುತ್ತಿದ್ದಾರೆ.