ಧಾರವಾಡ prajakiran.com : ಎರಡು ಲಾರಿಗಳ ಮುಖಾಮುಖಿ ಡಿಕ್ಕಿ ಲಾರಿ ಯಲ್ಲಿ ಸಿಲುಕಿಕೊಂಡ ಚಾಲಕನನ್ನು ರಕ್ಷಣೆ ಮಾಡಿದ ಘಟನೆ ಧಾರವಾಡ ಕೆಲಗೇರಿ ಬೈಪಾಸ್ ರಸ್ತೆ ಬಳಿ ಸಂಭವಿಸಿದೆ.
ಸ್ಥಳಿಯರು ಹಾಗೂ ಅಂಬುಲೆನ್ಸ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರು ಹರಸಾಹಸ ಪಟ್ಟು ಚಾಲಕನನ್ನು ರಕ್ಷಣೆ ಮಾಡಿದ್ದಾರೆ.
ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಅಂಬುಲೆನ್ಸ್ ಸಹಾಯದಿಂದ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಧಾರವಾಡದ ಕೆಲಗೇರಿ ಬೈಪಾಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ನಗರದ ಹೊರವಲಯದ ಕೆಲಗೇರಿ ಯ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಈ ಒಂದು ಅಪಘಾತ ನಡೆದಿದೆ.
ಹೆದ್ದಾರಿ ಯ ಕೆಲಗೇರಿ ಯ ಸೇತುವೆಯ ಮೇಲೆ ಈ ಒಂದು ಅಪಘಾತ ನಡೆದಿದೆ.ಎರಡು ಲಾರಿಗಳು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿವೆ.
ಈ ಕುರಿತು ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.