ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅತಿವೃಷ್ಟಿ ಹಾಗೂ ಬೆಳೆಹಾನಿ ಮೇಲಿನ ಚರ್ಚೆಗೆ ನೀಡಿದ ಉತ್ತರದ ಮುಖ್ಯಾಂಶಗಳು :
ಬೆಳಗಾವಿ prajakiran.com :
ರಾಜ್ಯ ಸರ್ಕಾರದ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.
ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಪ್ರಾಮಾಣಿಕ ಹೆಜ್ಜೆ ಇರಿಸಲಾಗಿದೆ.
ರಾಜ್ಯದಲ್ಲಿ ಒಟ್ಟು 10 ಲಕ್ಷ ಹೆಕ್ಟೇರ್ ಪ್ರದೇಶದ ರೈತರಿಗೆ 969 ಕೋಟಿ ರೂಪಾಯಿ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗಿದೆ.
ಒಂದು ಹೆಕ್ಟೇರ್ ಒಣ ಬೇಸಾಯ ಬೆಳೆಹಾನಿಗೆ ಎನ್ ಡಿ ಆರ್ ಎಫ್ ನಿಯಮದ ಪ್ರಕಾರ ನಿಗದಿಯಾಗಿರುವ ಪರಿಹಾದರ ಮೊತ್ತ 6800 ರೂಪಾಯಿ
ಈ ಪರಿಹಾರ ಮೊತ್ತ ಕಡಿಮೆ ಯಾಗುತ್ತದೆ. ಇದನ್ನು ಹೆಚ್ವಿಸಬೇಕೆಂಬುದು ನಮ್ಮ ಬಯಕೆ.
ಹೀಗಾಗಿ ರಾಜ್ಯ ಸರ್ಕಾರ ಈ ಮೊತ್ತಕ್ಕೆ ಅಧಿಕವಾಗಿ ತನ್ನ ಬೊಕ್ಕಸದಿಂದ 6800 ರೂಪಾಯಿ ಕೊಡಲು ನಿರ್ಧಾರ ಮಾಡಲಾಗಿದೆ.
ಒಟ್ಟು ೧ ಹೆಕ್ಟೇರ್ ಒಣಬೇಸಾಯ ದಲ್ಲಿನ ಬೆಳೆಹಾನಿಗೆ 13600 ರೂಪಾಯಿ ಬೆಳೆ ಪರಿಹಾರ ನೀಡಲು ನಿರ್ಧರಿಸಲಾಗಿದೆ
ಅದೇ ರೀತಿ ನೀರಾವರಿ ಪ್ರದೇಶದ ಒಂದು ಹೆಕ್ಟೇರ್ ಬೆಳೆ ಹಾನಿಗೆ 13500 ರೂಪಾಯಿ ನಿಗದಿಯಾಗಿದೆ
ಇದಕ್ಕೆ ಹೆಚ್ಚುವರಿಯಾಗಿ 11500 ರೂಪಾಯಿ ಸೇರಿಸಿ ಒಟ್ಟು 25000 ಬೆಳೆ ಪರಿಹಾರ ನೀಡಲು ತೀರ್ಮಾನಿಸಲಾಗಿದೆ
ಇದರಿಂದ ಒಟ್ಟು 12.69 ಲಕ್ಷ ಹೆಕ್ಟೇರ್ ಪ್ರದೇಶದ ರೈತರಿಗೆ ಅನುಕೂಲವಾಗಲಿದೆ
ತೋಟಗಾರಿಕೆ ಒಂದು ಹೆಕ್ಟೇರ್ ಬೆಳೆ ಹಾನಿಗೆ 18 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತಿದೆ
ಇದಕ್ಕೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ 10000 ರೂಪಾಯಿ ನೀಡಲು ನಿರ್ಧಾರ
ಹೀಗೆ ಪ್ರತಿ ಹೆಕ್ಟೆರ್ ತೋಟಗಾರಿಕೆ ಬೆಳೆ ಹಾನಿಗೆ ಒಟ್ಟು 28 ಸಾವಿರ ರೂಪಾಯಿಗಳನ್ನು ಪರಿಹಾರ ರೂಪದಲ್ಲಿ ವಿತರಿಸಲು ನಿರ್ಧರಿಸಲಾಗಿದೆ
ರಾಜ್ಯ ಸರ್ಕಾರ ಕೋವಿಡ್ ಮತ್ತು ಆರ್ಥಿಕ ತೊಂದರೆ ನಡುವೆಯೂ ಈ ನಿರ್ಧಾರ ಕೈಗೊಂಡಿದೆ
ರೈತರ ನೆರವಿಗೆ ನಿಲ್ಲುವ ನಿರ್ಧಾರ ಮಾಡಿದೆ. ನಾವು ರೈತ ಪರವಾಗಿದ್ದೇವೆ. ನಮ್ಮ ಸರ್ಕಾರ ರೈತರ ಪರವಾಗಿದೆ.
ಈ ಹೆಚ್ಚುವರಿ ಮೊತ್ತದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಒಟ್ಟು 1200 ಕೋಟಿ ಆರ್ಥಿಕ ಹೊರೆ ಬೀಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು .