ಧಾರವಾಡ prajakiran.com : ಮಂಡ್ಯದ ಮಾಜಿ ಸಂಸದ ಹಾಗೂ
ಮಾಜಿ ಸಚಿವ ಮತ್ತು ಕಾವೇರಿ ಜಲಾನಯನ ಪ್ರದೇಶದ ರೈತ ಹೋರಾಟಗಾರ ಜಿ.ಮಾದೇಗೌಡ ನಿಧನ ಹೊಂದಿದರು.
ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾದೇಗೌಡ ಅವರು ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಈ ಹಿನ್ನೆಲೆಯಲ್ಲಿ ಅವರನ್ನು
ಬೆಂಗಳೂರಿನ ಜಿ.ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
6 ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ ಒಂದು ಬಾರಿ ರಾಜ್ಯದ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಮಾದೇಗೌಡ, ಕಾವೇರಿ ನೀರಿನ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದನ್ನು ಇಲ್ಲಿ ಸ್ಮರಿಸಬಹುದು.