ರಾಜ್ಯ

ಧಾರವಾಡ ತಾಲೂಕಿನ ಗರಗದ ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿ ಲಿಂಗೈಕ್ಯ

ಧಾರವಾಡ ಪ್ರಜಾಕಿರಣ. ಕಾಮ್ : ಧಾರವಾಡ ಜಿಲ್ಲೆಯ ಸುಕ್ಷೇತ್ರ ಗರಗದ ಶ್ರೀ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿ (89) ಅನಾರೋಗ್ಯದಿಂದ ಲಿಂಗೈಕ್ಯರಾದರು.

ಧಾರವಾಡ ತಾಲೂಕಿನ ಗರಗದ ಪ್ರಸಿದ್ಧ ಮಠವಾದ ಮಡಿವಾಳೇಶ್ವರ ಮಠದ ಪೀಠಾಧಿಪತಿಯಾಗಿದ್ದ ಶ್ರೀಗಳು
55 ವರ್ಷಗಳ ಕಾಲ ಮಠವನ್ನು ಮುನ್ನೆಡಿಸಿದ್ದರು.

ಶ್ರೀಗಳು ಕಳೆದ ಹಲವು ದಿನಗಳಿಂದ ವಯೋ ಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಇಹಲೋಕ ತ್ಯಜಿಸಿದರು.

ಅಪಾರ ಭಕ್ತರನ್ನು ಅಗಲಿದ ಸ್ವಾಮೀಜಿ,
ಕಳೆದ ವಾರವಷ್ಟೇ ನಡೆದಿದ್ದ ಮಠದ
ಜಾತ್ರೆಯಲ್ಲಿ ಪಾಲ್ಗೊಂಡಿರಲಿಲ್ಲ.

ಸ್ವಾಮೀಜಿ ಅವರ ಅಂತ್ಯಕ್ರಿಯೆಯು ಫೆ. 13 ರಂದು ಸೋಮವಾರ ಮಧ್ಯಾಹ್ನ 12 ಗಂಟೆಗೆ ಗರಗ ಗ್ರಾಮದ ಶ್ರೀಮಠದ ಆವರಣದಲ್ಲಿ ನಡೆಯಲಿದೆ.

ಅಂತ್ಯಕ್ರಿಯೆಗೆ ನಾಡಿನ ವಿವಿಧ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.

ಇಂದು ಮಧ್ಯಾಹ್ನ 12.30 ರಿಂದ
ನಾಳೆ ಬೆಳಗ್ಗೆ 7 ಗಂಟೆಯವರೆಗೆ
ಅಂತಿಮ‌‌ ದರ್ಶನಕ್ಕೆ ಅವಕಾಶ
ಕಲ್ಪಿಸಲಾಗಿದೆ‌.

ನಾಳೆ ಬೆಳಗ್ಗೆ 7.30ಕ್ಕೆ ಶ್ರೀಗಳ ಅಂತಿಮ ಯಾತ್ರೆಯ ಮೆರವಣಿಗೆ
ಹಂಗರಕಿ ಗ್ರಾಮದಿಂದ ಗರಗ ಗ್ರಾಮವರೆಗೆ ನಡೆಯಲಿದೆ‌.

ಮೆರವಣಿಗೆ ನಂತರ ಶ್ರೀಮಠದ ಆವರಣದಲ್ಲಿ ಅಂತಿಮ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *