ಚೈನ್ನೈ Prajakiran.com : ಇಲ್ಲಿನ ಐಐಟಿ ಕ್ಯಾಂಪಸ್ ನಲ್ಲಿನ ತಾತ್ಕಾಲಿಕ ಯೋಜನಾ ಸಿಬ್ಬಂದಿಯ ಮೃತದೇಹ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ.
ಪಾಜೆಕ್ಟ್ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಉನ್ನಿಕೃಷ್ಣನನ್ ನಯರ್(22) ಮೃತ ಯುವಕ.
ಉನ್ನಿಕೃಷ್ಣನನ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾರ್ಥಮಿಕ ತನಿಖಾ ವರದಿ ತಿಳಿಸಿದೆ.
ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸಂಸ್ಥೆ ಅಧಿಕಾರಿಗಳೊಂದಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಐಐಟಿ ಆಡಳಿತ ಮಂಡಳಿ ತಿಳಿಸಿದೆ.
ಐಐಟಿ ಮದ್ರಾಸ್ ಕ್ಯಾಂಪಸ್ನಲ್ಲಿ ಗುರುವಾರ ತಾತ್ಕಾಲಿಕ ಯೋಜನಾ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರ.
ನಾವು ಈ ಘಟನೆಯಿಂದ ಆಘಾತಕ್ಕೊಳಗಾಗಿದ್ದೇವೆ ಮತ್ತು ತೀವ್ರವಾಗಿ ದುಃಖಿತರಾಗಿದ್ದೇವೆ ಮತ್ತು ಅಗಲಿದ ಸಿಬ್ಬಂದಿಯ ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.