ಅಂತಾರಾಷ್ಟ್ರೀಯ

ಮದ್ರಾಸ್ ಐಐಟಿ ಕ್ಯಾಂಪಸ್ : ತಾತ್ಕಾಲಿಕ ಯೋಜನಾ ಸಿಬ್ಬಂದಿ ಸುಟ್ಟ ರೀತಿಯಲ್ಲಿ ಮೃತದೇಹ ಪತ್ತೆ

ಚೈನ್ನೈ Prajakiran.com : ಇಲ್ಲಿನ ಐಐಟಿ ಕ್ಯಾಂಪಸ್ ನಲ್ಲಿನ ತಾತ್ಕಾಲಿಕ ಯೋಜನಾ ಸಿಬ್ಬಂದಿಯ ಮೃತದೇಹ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ.

ಪಾಜೆಕ್ಟ್ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಉನ್ನಿಕೃಷ್ಣನನ್ ನಯರ್(22) ಮೃತ ಯುವಕ.
ಉನ್ನಿಕೃಷ್ಣನನ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾರ್ಥಮಿಕ ತನಿಖಾ ವರದಿ ತಿಳಿಸಿದೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸಂಸ್ಥೆ ಅಧಿಕಾರಿಗಳೊಂದಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಐಐಟಿ ಆಡಳಿತ ಮಂಡಳಿ ತಿಳಿಸಿದೆ.

ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ ಗುರುವಾರ ತಾತ್ಕಾಲಿಕ ಯೋಜನಾ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರ.

ನಾವು ಈ ಘಟನೆಯಿಂದ ಆಘಾತಕ್ಕೊಳಗಾಗಿದ್ದೇವೆ ಮತ್ತು ತೀವ್ರವಾಗಿ ದುಃಖಿತರಾಗಿದ್ದೇವೆ ಮತ್ತು ಅಗಲಿದ ಸಿಬ್ಬಂದಿಯ ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *