ಬಳ್ಳಾರಿ prajakiran.com : ಪ್ರಸಿದ್ದ ಮೈಲಾರ ಲಿಂಗೇಶ್ವರನ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ಅವರು ಮಂಗಳವಾರ ಬೆಳಗಿನ ಜಾವದಲ್ಲಿ ಅಸು ನೀಗಿದ್ದಾರೆ.
ಕಳೆದ ಹಲವು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿದ್ದ ಮಾಲತೇಶಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಅವರ ನಿಧನದಿಂದ ಮೈಲಾರ ಲಿಂಗನ ಭಕ್ತರಲ್ಲಿ ಬಹಳ ನೋವುಂಟು ಮಾಡಿದೆ.
ಸುಮಾರು 31ವರ್ಷಗಳ ಕಾಲ ಕಾರ್ಣಿಕ ನುಡಿದಿದ್ದ ಶ್ರೀಕ್ಷೇತ್ರ ಮೈಲಾರದ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಅವರ ಕುಟುಂಬ ಬಹಳಷ್ಟು ಸಂಕಷ್ಟಕ್ಕೆ ಸಿಲುಕಿತ್ತು.
ನಾಡಿನ ಭಕ್ತರು ಸಹಾಯ ಹಸ್ತಚಾಚುವ ಮೂಲಕ ಅವರಿಗೆ ಮನೆ ನಿರ್ಮಿಸಿಕೊಳ್ಳಲು ನೆರವಾಗಿದ್ದರು.
ಆದರೆ, ಮನೆ ಪೂರ್ಣಗೊಳ್ಳುವ ಮುನ್ನವೇ ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಮಾಲತೇಶಪ್ಪ ಅವರ ಆತ್ಮಕ್ಕೆ ದೇವರು ಶಾಂತಿ, ನೆಮ್ಮದಿ ನೀಡಲಿ, ಅವರ ಕುಟುಂಬದ ಸದಸ್ಯರಿಗೆ ದುಖಃ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶ್ರೀಮೈಲಾರಲಿಂಗೇಶ್ವರ ದೇಗುಲದ ಧರ್ಮಾಧಿಕಾರಿ ಶ್ರೀಗುರು ವೆಂಕಪ್ಪಯ್ಯ ಒಡೆಯರ್ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಪ್ರಾರ್ಥಿಸಿದ್ದಾರೆ.