ರಾಜ್ಯ

ವರ್ಗಾವಣೆಗೊಂಡ ಮೇಜರ್ ಸಿದ್ದಲಿಂಗಯ್ಯ ಹಿರೇಮಠಗೆ ಬೀಳ್ಕೊಡುಗೆ

ಧಾರವಾಡ prajakiran.com : ವರ್ಗಾವಣೆಗೊಂಡ ಇಲ್ಲಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಶೈಕ್ಷಣಿಕ ವಲಯದ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರನ್ನು ಬುಧವಾರ ಅವರ ಕಚೇರಿಯಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಬೀಳ್ಕೊಡಲಾಯಿತು.

ಶಿಕ್ಷಣ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಿರ್ದೇಶಕರಾದ ಮಮತಾ ನಾಯಕ ಇಲಾಖೆಯ ಸಮಸ್ತ ಸಿಬ್ಬಂದಿ ವರ್ಗದ ಪರವಾಗಿ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಅವರಿಗೆ ಶಾಲು ಹೊದಿಸಿ ಗೌರವಿಸಿದರು.

ತಮ್ಮ ೩ ವರುಷಗಳ ಅವಧಿಯ ಆಡಳಿತದ ಪ್ರಕ್ರಿಯೆಯಲ್ಲಿ ಸಹಕಾರ ನೀಡಿದ ಬೆಳಗಾವಿ ವಿಭಾಗದ ಎಲ್ಲ ಜಿಲ್ಲೆ-ತಾಲೂಕುಗಳ ಅಧಿಕಾರಿಗಳಿಗೆ ಹಾಗೂ ಸಮಸ್ತ ಬೋಧಕೇತರ ಸಿಬ್ಬಂದಿಗೆ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಕೃತಜ್ಞತೆ ಸಲ್ಲಿಸಿದರು.

ಪ್ರಭಾರ ಜಂಟಿ ನಿರ್ದೇಶಕ ಮೃತ್ಯುಂಜಯ ಕುಂದಗೋಳ, ಉಪನಿರ್ದೇಶಕ ಆರ್.ಎಸ್. ಮುಳ್ಳೂರ, ಜಿಲ್ಲಾ ಆಡಳಿತ ಉಪನಿರ್ದೇಶಕ ಮೋಹನಕುಮಾರ ಹಂಚಾಟೆ, ಅಭಿವೃದ್ಧಿ ಉಪನಿರ್ದೇಶಕ ಅಬ್ದುಲ್ ವಾಜೀದ್ ಖಾಜಿ, ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ, ಬಿಇಓಗಳಾದ ಉಮೇಶ ಬೊಮ್ಮಕ್ಕನವರ, ಎ.ಎ. ಶೇಖ, ಅಶೋಕಕುಮಾರ ಸಿಂದಗಿ ಸೇರಿದಂತೆ ಇಲಾಖೆಯ ವಿವಿಧ ಶ್ರೇಣಿ ಅಧಿಕಾರಿಗಳು, ಡಯಟ್ ಉಪನ್ಯಾಸಕರು, ಲಿಪಿಕ ನೌಕರರು ಮುಂತಾದವರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *