ಕೋಲ್ಕತ್ತಾ prajakiran.com : ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಏರಿ ಗೆಲುವಿನ ನಗೆ ಬೀರಿದ ಮಮತಾ ಬ್ಯಾನರ್ಜಿಯವರು ನಂದಿಗ್ರಾಮದಲ್ಲಿ ಸೋಲು ಅನುಭವಿಸಿದ್ದಾರೆ.
ಸುವೇಂದು ಅಧಿಕಾರಿ ಬಿಜೆಪಿ ಅಭ್ಯರ್ಥಿಯಾಗಿ 1736 ಮತಗಳಿಂದ ಗೆಲುವು ದಾಖಲಿಸಿದ್ದಾರೆ.
215 ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ ಟಿಎಂಸಿ ಮುಖ್ಯಮಂತ್ರಿ ಯಾಗಿರುವ ದೀದಿ ಸೋಲು ಅನುಭವಿಸಿದ್ದಾರೆ.
ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ.
ಇದು ನನ್ನ ಸೋಲು ಅಲ್ಲ. ಚುನಾವಣಾ ಅಧಿಕಾರಿಗಳು ಒಂದು ಪಕ್ಷದ ಎಜೆಂಟ್ ರಂತೆ ಕಾರ್ಯನಿರ್ವಹಿಸಿದ್ದಾರೆ.
ಇದಕ್ಕೆ ನನ್ನ ತಕರಾರು ಇದೆ ಎಂದು ಮಮತಾ ಬ್ಯಾನರ್ಜಿಯವರು ಕಿಡಿಕಾರಿದ್ದಾರೆ.
ನಂದಿಗ್ರಾಮದಲ್ಲಿ ಚುನಾವಣಾ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ. ಮೊದಲು ದೀದಿ ಗೆಲುವು ಎಂದು ಹೇಳಲಾಗಿತ್ತು.
ಆದರೆ ತಾಂತ್ರಿಕ ಕಾರಣಗಳಿಂದ ಚುನಾವಣಾ ಫಲಿತಾಂಶ ಘೋಷಣೆ ತಡೆ ಹಿಡಿಯಲಾಗಿತ್ತು. ನಾವು ಅಧಿಕೃತವಾಗಿ ಘೋಷಿಸಿರಲಿಲ್ಲ. ಅದಕ್ಕೆ ತಕರಾರು ತೆಗೆಯುವುದು ಸರಿಯಲ್ಲ ಎಂದು ಟ್ವೀಟ್ ಮಾಡಿತ್ತು.
ವೀಲ್ ಚೇರ್ ನಲ್ಲಿ ಕುಳಿತು ಆಡಳಿತ ರೂಢ ಕೇಂದ್ರದ ಬಿಜೆಪಿ ನೇತೃತ್ವದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾಮರ್ಥ್ಯದ ಎದುರು ಅಕ್ಷರಶಃ ಒಂಟಿಯಾಗಿ ಹೋರಾಡಿ ನೂರರ ಅಂಕಿ ಸಮೀಪ ಬರದಂತೆ ನೋಡಿಕೊಂಡಿರುವುದು ವಿಶೇಷ.