ನವದೆಹಲಿ prajakiran.com : ನನ್ನ ಗುರಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ರೈತರಿಗೆ ಮಾರಕವಾಗಿರುವ ಜನ ವಿರೋಧಿ ಮಸೂದೆಯನ್ನು ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಹೇಳಿದ್ದಾರೆ.
ನಮ್ಮ ಸರ್ಕಾರ ಯಾವಾಗಲೂ ರೈತರ ಹಿತ ಕಾಯಲು ಬದ್ದವಾಗಿದೆ. ಅವರ ಪರವಾಗಿಯೇ ಇರುತ್ತದೆ ಎಂದು ಹೇಳಿದರು
ದೆಹಲಿ ರೈತರ ಪ್ರತಿಭಟನೆ ಕೇವಲ ಒಂದು ಜಾಗಕ್ಕೆ ಸೀಮಿತ ಅಲ್ಲ, ಇದು ದೇಶಕ್ಕೆ ಸಂಬಂಧಿಸಿದ್ದು ಎಂದು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ದೀದಿ ಗುಡುಗಿದರು