ಧಾರವಾಡ prajakiran.com : ಖಾನಾಪುರ ಶಾಸಕಿ ಅಂಜಲಿ ನಿಂಬಾಳಕರ ಮತ್ತೆ ಮರಾಠಿ ಭಾಷೆಯಲ್ಲಿ ಮಾತನಾಡುವ ಮೂಲಕ ತಮ್ಮ ಭಾಷಾಪ್ರೇಮ ಪ್ರದರ್ಶನ ಮಾಡಿದ್ದಾರೆ.
ಅವರು ಭಾನುವಾರ ಧಾರವಾಡದಲ್ಲಿ ನಡೆದ ಮರಾಠ ಕ್ರಾಂತಿ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಮರಾಠಿ ಪ್ರೇಮ ಪ್ರದರ್ಶನ ಮಾಡಿದ್ದು, ಸಭೆಯಲ್ಲಿ ಮಾತನಾಡಿದ ಅಂಜಲಿ ನಿಂಬಾಳ್ಕರ ಭಾಷಣದುದ್ದಕ್ಕೂ ಮರಾಠಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಮಾತನಾಡಿದ್ದಾರೆ.
ನನ್ನ ಖಾನಾಪುರ ಕ್ಷೇತ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮರಾಠಿ ಭಾಷಿಕರು ಹೆಚ್ಚಿದ್ದಾರೆ. ಮಾರವಾಡಿ, ಲಿಂಗಾಯತರ, ಬ್ರಾಹ್ಮಣ ಯಾವುದೇ ಜಾತಿ ಇದ್ದರೂ ಮರಾಠಿ ಭಾಷಿಕರು ಹೆಚ್ಚಿದ್ದಾರೆ.
ಅಲ್ಲಿ ಕನ್ನಡ ಮಾತನಾಡಿದರೆ ಅರ್ಥ ಆಗುವುದಿಲ್ಲ, ಇಲ್ಲವಾದರೆ ಬೆಳಗಿನವರೆಗೆ ರಾಮಾಯಣ ಕೇಳಿ ಕೊನೆಗೆ ರಾಮಗೆ
ಸೀತಾ ಏನು ಅಂತಾ ಕೇಳ್ತಾರೆ. ಅದಕ್ಕೆ ನಾವು ಅಲ್ಲಿ ಮರಾಠಿ ಭಾಷೆಯನ್ನೇ ಮಾತನಾಡುತ್ತೇವೆ ಎಂದರು.
ಬೆಂಗಳೂರಿನಲ್ಲಿ ಕನ್ನಡ ನಾಡಿನಲ್ಲಿ ಹುಟ್ಟಿದ ಜನರಿಗೆ ಕನ್ನಡ ಬರೋದಿಲ್ಲ, ಅವರು ತಮಿಳು, ತೆಲುಗು ಮಾತನಾಡುತ್ತಾರೆ.
ಆದರೆ ಮರಾಠ ಸಮಾಜ ಕನ್ನಡ ಭಾಷೆ ಬಗ್ಗೆ ಅಭಿಮಾನ ಹೊಂದಿದ್ದೇವೆ ಎಂದು ಶಾಸಕಿ ಅಂಜಲಿ ನಿಂಬಾಳಕರ್ ಹೇಳಿದರು.