ಧಾರವಾಡ prajakiran.com: ಕೋವಿಡ್ ಎರಡನೇ ಅಲೆಯ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದರಿಂದ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಗಳು ಮತ್ತು ಅವುಗಳ ಆವರಣಗಳಲ್ಲಿ ಮಾಸ್ಕ್ ಧರಿಸುವಿಕೆ , ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ.
ಈ ಆದೇಶ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ್ ಎಂ.ಅಡಿಗ ತಿಳಿಸಿದ್ದಾರೆ.
ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಈ ನಿಟ್ಟಿನಲ್ಲಿ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ಜಿಲ್ಲಾ ,ಸಿವಿಲ್ , ಜೆಎಂಎಫ್ ಸಿ ಹಾಗೂ ಎಲ್ಲಾ ತಾಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಈ ಆದೇಶ ಕಡ್ಡಾಯವಾಗಿ ಜಾರಿಯಾಗಲಿದೆ.
ನ್ಯಾಯಾಲಯಗಳಿಗೆ ಆಗಮಿಸುವ ವಕೀಲರು,ಕಕ್ಷಿದಾರರು, ಅರ್ಜಿದಾರರು,ಅಧಿಕಾರಿಗಳು, ಸಿಬ್ಬಂದಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
ಸ್ಯಾನಿಟೈಸರ್ ಬಳಸಬೇಕು.ದೈಹಿಕ ಅಂತರ ಕಾಪಾಡಿಕೊಳ್ಳುವುದನ್ನು ನಿರ್ಲಕ್ಷಿಸಬಾರದು. ಅನಗತ್ಯವಾಗಿ ನ್ಯಾಯಾಲಯ ಆವರಣಗಳಿಗೆ ಪ್ರವೇಶಿಸಬಾರದು ಎಂದು ಸೂಚಿಸಿದ್ದಾರೆ.