ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಮಾಸ್ಕ್ ಕಡ್ಡಾಯ, ಆದೇಶ ಉಲ್ಲಂಘಿಸಿದರೆ ದಂಡ

ಧಾರವಾಡ prajakiran.com: ಕೋವಿಡ್ ಎರಡನೇ ಅಲೆಯ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದರಿಂದ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಗಳು ಮತ್ತು ಅವುಗಳ ಆವರಣಗಳಲ್ಲಿ ಮಾಸ್ಕ್ ಧರಿಸುವಿಕೆ , ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ.

ಈ ಆದೇಶ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ್ ಎಂ‌.ಅಡಿಗ ತಿಳಿಸಿದ್ದಾರೆ.

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಈ ನಿಟ್ಟಿನಲ್ಲಿ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಜಿಲ್ಲಾ ,ಸಿವಿಲ್ , ಜೆಎಂಎಫ್ ಸಿ ಹಾಗೂ ಎಲ್ಲಾ ತಾಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಈ ಆದೇಶ ಕಡ್ಡಾಯವಾಗಿ ಜಾರಿಯಾಗಲಿದೆ.

ನ್ಯಾಯಾಲಯಗಳಿಗೆ ಆಗಮಿಸುವ ವಕೀಲರು,ಕಕ್ಷಿದಾರರು, ಅರ್ಜಿದಾರರು,ಅಧಿಕಾರಿಗಳು, ಸಿಬ್ಬಂದಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

ಸ್ಯಾನಿಟೈಸರ್ ಬಳಸಬೇಕು.ದೈಹಿಕ ಅಂತರ ಕಾಪಾಡಿಕೊಳ್ಳುವುದನ್ನು ನಿರ್ಲಕ್ಷಿಸಬಾರದು. ಅನಗತ್ಯವಾಗಿ ನ್ಯಾಯಾಲಯ ಆವರಣಗಳಿಗೆ ಪ್ರವೇಶಿಸಬಾರದು ಎಂದು ಸೂಚಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *