ರಾಜ್ಯ

ಮಸ್ಕಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪಾಲು : ಬಿಜೆಪಿಗೆ ತೀವ್ರ ಹಿನ್ನಡೆ

ರಾಯಚೂರ prajakiran.com :
ತೀವ್ರ ಕುತೂಹಲ ಕೆರಳಿಸಿದ್ದ ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, ಮಸ್ಕಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಪಾಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಆ ಮೂಲಕ ಕೈ ತೊರೆದು ಆಪರೇಷನ್ ಕಮಲದ ಬಲೆಗೆ ಬಿದ್ದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮುಗ್ಗರಿಸುವಂತೆ ಮಾಡಿದ್ದಾರೆ.

ಇದು ಆಡಳಿತರೂಢ ಬಿಜೆಪಿ ಗೆ ತೀವ್ರ ಹಿನ್ನಡೆ ಆದಂತಾಗಿದೆ. ಅದರಲ್ಲೂ ಬಿಜೆಪಿ ಯುವ ನಾಯಕ ವಿಜಯೇಂದ್ರ ಯಡಿಯೂರಪ್ಪ ರಣತಂತ್ರ ಇಲ್ಲಿ ಕೆಲಸ ಮಾಡಿಲ್ಲ.

ಬರೋಬ್ಬರಿ 30,641 ಮತಗಳ‌ ಅಂತರದ ಗೆಲುವಿನ‌ ನಗೆ ಬೀರಿರುವ ಬಸನಗೌಡ ತುರವಿಹಾಳ ಒಟ್ಟು 86,222 ಮತ ಪಡೆದರೆ,
ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ 55,581 ಮತ ಪಡೆದಿದ್ದಾರೆ.

ತಮ್ಮ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ ಕ್ಷೇತ್ರದ ಮತದಾರರಿಗೆ ಬಸನಗೌಡ ತುರುವಿಹಾಳ ಧನ್ಯವಾದವನ್ನು ಸಮರ್ಪಿಸಿದ್ದರೆ, ಜನಾದೇಶಕ್ಕೆ ತಲೆ ಬಾಗುತ್ತೇನೆ ಎಂದು ಪ್ರತಾಪ್ ಗೌಡಪಾಟೀಲ ಪ್ರತಿ ಕ್ರಿಯೆ ನೀಡಿದ್ದಾರೆ.

ಈ ಹಿಂದೆ ಬಿಜೆಪಿ ಪಕ್ಷದ ಜೊತೆಗೆ ಗುರುತಿಸಿಕೊಂಡಿದ್ದ ಬಸವಗೌಡ ತುರವಿಹಾಳ ಕಾಂಗ್ರೆಸ್ ಸೇರಿದರೆ, ಕಾಂಗ್ರೆಸ್ ಪಕ್ಷದ ಶಾಸಕರಾಗಿ ಆಯ್ಕೆಯಾಗಿ ಆಪರೇಷನ್ ಕಮಲ ಮೂಲಕ ಬಿಜೆಪಿ ಸೇರಿ ಸರಕಾರದ ರಚನೆಗೆ ಕಾರಣವಾಗಿದ್ದನ್ಬು ಇಲ್ಲಿ ಸ್ಮರಿಸಬಹುದು.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *