ರಾಜ್ಯ

ಕೋವಿಡ್ ನಿಯಂತ್ರಣಕ್ಕೆ  ಬೆರಳೆಣಿಕೆಯಷ್ಟು ಖಾಸಗಿ ಆಸ್ಪತ್ರೆಗಳು




ಧಾರವಾಡ prajakiran.com : ಕೋವಿಡ್ ಚಿಕಿತ್ಸೆಗೆ ಧಾರವಾಡ ಜಿಲ್ಲೆಯಾದ್ಯಂತ ಕಿಮ್ಸ್ ಹಾಗೂ ಬೆರಳೆಣಿಕೆಯಷ್ಟು ಖಾಸಗಿ ಆಸ್ಪತ್ರೆಗಳು ಮಾತ್ರ ಶ್ರಮಿಸುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ ಅಸಮಾಧಾನ ವ್ಯಕ್ತಪಡಿಸಿದರು.

 ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಕಾರ್ಯಪಡೆ ಸಭೆ ಉದ್ದೇಶಿಸಿ ಮಾತನಾಡಿದರು.

ಕರೊನಾ ವಿರುದ್ಧದ ಯುದ್ಧದಲ್ಲಿ ಖಾಸಗಿ ವೈದ್ಯರ ಭಾಗವಹಿಸುವಿಕೆ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ. ಈ ಕುರಿತು ಅನೇಕ ಬಾರಿ ಸಭೆ ಕರೆದು ಮನವಿ ಮಾಡಿಕೊಳ್ಳಲಾಗಿದೆ.




ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಖಾಸಗಿ ಆಸ್ಪತ್ರೆಗಳ ಸೇವೆ ಪಡೆಯುವುದು ಅನಿವಾರ್ಯವಾಗಲಿದೆ ಎಂದರು.

ಕರೊನಾ ವಿರುದ್ಧದ ಈ ಸಮರದಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು ತಮ್ಮಲ್ಲಿರುವ ಅನಗತ್ಯ ಭಯವನ್ನು ತೊರೆಯಬೇಕು.

ದೇಶದ ಜನರ ಆರೋಗ್ಯಕ್ಕಾಗಿ ಕರೊನಾ ಸೇನಾನಿಗಳಾಗಿ ಕಾರ್ಯನಿರ್ವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಚಿಕಿತ್ಸೆಗೆ ಹಿಂದೇಟು ಹಾಕಬಾರದು ಎಂದರು.




PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *